ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ! ಸಿಎಂ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ

ಪೇ ಸಿಎಂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದೆ.

ಬೆಂಗಳೂರು: ಪೇ ಸಿಎಂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪೇ ಸಿಎಂ ಎಂದಾಕ್ಷಣ ಗಾಬರಿಯಿಂದ ಬಸವರಾಜ ಬೊಮ್ಮಾಯಿ ಅವರು ಹೆಗಲು ಮುಟ್ಟಿಕೊಳ್ಳುವುದೇಕೆ, 'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ ಎಂದು ಕೇಳಿದೆ.

ಪಿಎಸ್ ಐ ಹುದ್ದೆಗಳು 80 ಲಕ್ಷಕ್ಕೆ ಮಾರಾಟವಾಗಿದ್ದರೂ ಹಗರಣ ನಿರಾಕರಿಸಿದ್ರಿ, ಬಸವರಾಜ ದಡೇಸಗೂರ ಹಾಗೂ ಅಶ್ವತ್ಥ ನಾರಾಯಣ್ ಅವರ ವಿಚಾರಣೆ ನಡೆಸಲೇ ಇಲ್ಲ. ಪೆಮೆಂಟ್ ಪಾಲು ನಿಮಗೂ ತಲುಪಿದೆಯೇ ಎಂದು ಪ್ರಶ್ನಿಸಿದೆ.

ಬಿಜೆಪಿಗೆ ಸರ್ಕಾರವೆಂದರೆ ಬಿಸ್ನೆಸ್ ಇದ್ದ ಹಾಗೆ. ಶಾಸಕರ ಖರೀದಿಗೆ ಬಂಡವಾಳ ಹೂಡಿಕೆಯಾಗುತ್ತದೆ. ನಂತರ ಸಿಎಂ ಹುದ್ದೆಗೆ 2,500 ಕೋಟಿ ಪೇ ಸಿಎಂ ಮಾಡ್ಬೇಕು.ಶಾಸಕರು ಸಚಿವ ಸ್ಥಾನಕ್ಕೆ ಪೇ ಸಿಎಂ ಮಾಡ್ಬೇಕು. ಉದ್ಯೋಗಾಕಾಂಕ್ಷಿಗಳು ಸಚಿವರಿಗೆ ಪೇ ಸಿಎಂ ಮಾಡ್ಬೇಕು, ಟೆಂಡರ್ ಸಿಗಬೇಕಾದರೆ, ಬಿಲ್ ಬಿಡುಗಡೆ ಆಗಬೇಕಾದರೆ ಗುತ್ತಿಗೆದಾರರು ಪೇ ಸಿಎಂ ಮಾಡಬೇಕು ಎಂದು ಆರೋಪಿಸಿದೆ. 

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್ , ಈ ಕಡೆಯಿಂದ ಪೇ ಸಿಎಂ ಮಾಡಿ, ಆ ಕಡೆಯಿಂದ ಹುದ್ದೆ ಪಡೆಯಿರಿ, ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಹಿಂಜರಿಯುತ್ತಿರುವುದೇಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

SCROLL FOR NEXT