ರಾಜಕೀಯ

ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿದ್ದು ವಿರುದ್ಧ ಬಿಎಸ್‌ವೈ ಕಿಡಿ!

Vishwanath S

ಮೈಸೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ( ಆರ್‌ಎಸ್‌ಎಸ್)ದ ವಿರುದ್ಧ ಟೀಕೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಆರ್‌ಎಸ್‌ಎಸ್ ವಿರುದ್ಧ ಮಾತನಾಡುವುದು ಸರಿಯಲ್ಲ. ಶರನ್ನವರಾತ್ರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದ ಬಿಎಸ್‌ವೈ, 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಿದ್ದರಾಮಯ್ಯ ರಾಜಕೀಯದಲ್ಲಿ ವಿಚಲಿತರಾಗಿದ್ದಾರೆ ಎಂದರು. 

ಮೈಸೂರಿನಲ್ಲಿ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಿದ ಜನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಂದು ಪಾಠ ಕಲಿಸಲು ಕಾಯುತ್ತಿದ್ದಾರೆ. ಬಿಜೆಪಿ ನಾಯಕರು ಪ್ರಚಾರವನ್ನು ತೀವ್ರಗೊಳಿಸಿದ್ದರೆ ಅವರು ಬಾದಾಮಿಯಲ್ಲಿ ಸೋಲುತ್ತಿದ್ದರು ಎಂದು ಬಿಎಸ್‌ವೈ ನೆನಪಿಸಿಕೊಂಡರು.

ರಾಜ್ಯ ಸರ್ಕಾರ ಈ ಹಿಂದೆ ನೀಡಿದ ಭರವಸೆಯಂತೆ ನಿರ್ಗತಿಕರಿಗೆ ಮನೆ ನೀಡದೆ ವಸತಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಎಸ್‌ವೈ ವಾಗ್ದಾಳಿ ನಡೆಸಿದರು. ನಂತರ ಶರನ್ನವರಾತ್ರಿ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಬಿಎಸ್ ವೈ ಅವರಿಗೆ ರಂಭಾಪುರಿ ಶ್ರೀಗಳು ಆಶೀರ್ವಚನ ನೀಡಿದರು.

SCROLL FOR NEXT