ಮೈಸೂರಿನಲ್ಲಿ ಬಸವರಾಜ ಬೊಮ್ಮಾಯಿ 
ರಾಜಕೀಯ

ಟೀಕೆಗಳೇ ನನಗೆ ಟಾನಿಕ್, ನನ್ನ ಆತ್ಮಸ್ಥೈರ್ಯ- ಸಂಕಲ್ಪವನ್ನು ಹೆಚ್ಚಿಸುತ್ತವೆ: ಸಿಎಂ ಬಸವರಾಜ ಬೊಮ್ಮಾಯಿ

ಟೀಕೆಗಳು ತಮಗೆ ಟಾನಿಕ್ ಇದ್ದಂತೆ, ಅದನ್ನು ಸಮರ್ಥವಾಗಿ ಬಳಸಿಕೊಂಡು, ತಮ್ಮ ಗುರಿಯನ್ನು ಮುಟ್ಟವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರು: ಟೀಕೆಗಳು ತಮಗೆ ಟಾನಿಕ್ ಇದ್ದಂತೆ, ಅದನ್ನು ಸಮರ್ಥವಾಗಿ ಬಳಸಿಕೊಂಡು, ತಮ್ಮ ಗುರಿಯನ್ನು ಮುಟ್ಟವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರ ಶೇ.40 ಕಮಿಷನ್  ಪಡೆಯುತ್ತಿದೆ ಎಂಬ ಕಾಂಗ್ರೆಸ್ ನ ‘ಪೇಸಿಎಂ’ ಅಭಿಯಾನದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ತಮ್ಮ ಕ್ಷೇತ್ರದ ನಿವಾಸಿಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಶಾಸಕ ಎಸ್‌ಎ ರಾಮದಾಸ್ ಅವರು ಆಯೋಜಿಸಿದ್ದ ಒಂದು ವಾರದ ಮೋದಿ ಯುಗ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬೊಮ್ಮಾಯಿ, ಟೀಕೆಗಳು ತಮ್ಮ  ಆತ್ಮವಿಶ್ವಾಸದ  ಉತ್ತೇಜನಕ್ಕೆ ಸಹಾಯ ಮಾಡುತ್ತವೆ ಎಂದಿದ್ದಾರೆ.

ಕಳೆದ ಎರಡು ಮೂರು ದಶಕಗಳಲ್ಲಿ, ನಾನು ಹಲವು ಟೀಕೆಗಳನ್ನು ಸ್ವೀಕರಿಸುತ್ತಿದ್ದೇನೆ, ಅದು ನನಗೆ ತುಂಬಾ ಹೊಸದಲ್ಲ. ರಾಜಕಾರಣಿಗಳು ಮುಂದಿನ ಚುನಾವಣೆಯ ಬಗ್ಗೆ ಯೋಚಿಸುತ್ತಾರೆ, ಆದರೆ ರಾಜ್ಯದ ಹಿತ ಚಿಂತಕ ಭವಿಷ್ಯದ ಪೀಳಿಗೆಯ ಬಗ್ಗೆ ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ. ನನ್ನ ವಿರುದ್ಧದ ಯಾವುದೇ ಟೀಕೆಯು ನನ್ನನ್ನು ಕುಗ್ಗಿಸುವುದಿಲ್ಲ ಟೀಕೆಗಳೇ ನನಗೆ ಟಾನಿಕ್. ನನ್ನ ಆತ್ಮಸ್ಥೈರ್ಯ ಮತ್ತು ಸಂಕಲ್ಪವನ್ನು ಹೆಚ್ಚಿಸುವ ಅವುಗಳನ್ನು ‌ಸ್ವಾಗತಿಸುತ್ತೇನೆ. ವಿರೋಧವನ್ನು ಮೆಟ್ಟಿಲಾಗಿಸಿಕೊಂಡು ಗುರಿಯ ಕಡೆಗೆ ಹೋಗುತ್ತೇನೆ. ಹೇಡಿಗಳು ಮಾಡುವ ಕೆಲಸಕ್ಕೆ ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ಕಾಂಗ್ರೆಸ್  ನಾಯಕರು ತಮ್ಮ ಅವಧಿಯಲ್ಲಿ ಯೋಜನೆಗಳನ್ನು ಮಾತ್ರ ಘೋಷಿಸುತ್ತಾರೆ. ಆದರೆ ಅವುಗಳನ್ನು ಕಾರ್ಯಗತಗೊಳಿಸಲು ಮತ್ತು ಜನರಿಗೆ ಸಹಾಯ ಮಾಡಲು ಏನನ್ನೂ ಮಾಡುವುದಿಲ್ಲ, ಸರ್ಕಾರದಿಂದ ಬಿಡುಗಡೆಯಾಗುವ ಹಣವನ್ನು ಮಧ್ಯದಲ್ಲಿಯೇ ತಿಂದು ಹಾಕುವ ಸಂಸ್ಕೃತಿ‌ ಇತ್ತು. ಅದನ್ನೇ ಹಿಂದಿನ ಒಬ್ಬ ಪ್ರಧಾನಿ ಹೇಳಿದ್ದರು.

ಮಧ್ಯವರ್ತಿಗಳಿರುವ ರಾಜಕೀಯ ವ್ಯವಸ್ಥೆ ಈಗಲೂ ಇದೆ. ಅದನ್ನು ಹೋಗಲಾಡಿಸುವುದಕ್ಕಾಗಿಯೇ ಮೋದಿ ಡಿಜಿಟಲೀಕರಣ ಮಾಡುತ್ತಿದ್ದಾರೆ. ನೇರ ನಗದು ವರ್ಗಾವಣೆ ಮೂಲಕ ಎಲ್ಲ ಯೋಜನೆಗಳ ಲಾಭವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ’ ಎಂದರು.

ಸರ್ಕಾರದ ಸೌಲಭ್ಯ ಕೊಡಿಸುವುದಾಗಿ ದುಡ್ಡು ಪಡೆಯುವ ಮಧ್ಯವರ್ತಿಗಳಿದ್ದಾರೆ. ಆದರೆ, ಕೃಷ್ಣರಾಜ ಕ್ಷೇತ್ರದಲ್ಲಿ ಶಾಸಕ ರಾಮದಾಸ್ ನೇರವಾಗಿ 70ಸಾವಿರ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸುತ್ತಿರುವುದು ದಾಖಲೆಯೇ ಸರಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video