ಪುತ್ರ ನಿಖಿಲ್ ಜೊತೆ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ರಾಷ್ಟ್ರೀಯ ಪಕ್ಷಗಳ ಅಬ್ಬರದ ನಡುವೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸದ್ದಿಲ್ಲದೆ ತಯಾರಿ: ರಾಜ್ಯೋತ್ಸವದಂದು 'ಪಂಚರತ್ನ ಯಾತ್ರೆ'ಗೆ ಚಾಲನೆ!

ಕಾಂಗ್ರೆಸ್‌, ಬಿಜೆಪಿ ಪರಸ್ಪರ ಆರೋಪ–ಪ್ರತ್ಯಾರೋಪದಲ್ಲಿ ತೊಡಗಿರುವ ಸಮಯದಲ್ಲೇ ಸದ್ದಿಲ್ಲದೇ ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿರುವ ಜೆಡಿಎಸ್‌, ನವೆಂಬರ್ 1ರಿಂದ ಪಂಚರತ್ನ ರಥ ಯಾತ್ರೆ ಆರಂಭಿಸಲಿದೆ.

ಬೆಂಗಳೂರು: ಕಾಂಗ್ರೆಸ್‌, ಬಿಜೆಪಿ ಪರಸ್ಪರ ಆರೋಪ–ಪ್ರತ್ಯಾರೋಪದಲ್ಲಿ ತೊಡಗಿರುವ ಸಮಯದಲ್ಲೇ ಸದ್ದಿಲ್ಲದೇ ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿರುವ ಜೆಡಿಎಸ್‌, ನವೆಂಬರ್ 1ರಿಂದ ಪಂಚರತ್ನ ರಥ ಯಾತ್ರೆ ಆರಂಭಿಸಲಿದೆ.

ಇತ್ತೀಚೆಗಷ್ಟೇ ದೆಹಲಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಿಹಾರ ಸಿಎಂ ನಿತೀಶ್ ಕುಮಾರ್  ಮತ್ತು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ತಮ್ಮದೇ ಆದ ಯೋಜನೆ ರೂಪಿಸಿದ್ದಾರೆ. ಚಂದ್ರಶೇಖರ್ ರಾವ್ ಅವರ ಸಲಹೆ ಮೇರೆಗೆ, ಕುಮಾರಸ್ವಾಮಿ  ದೆಹಲಿಯಲ್ಲಿ ಚುನಾವಣಾ ತಂತ್ರಜ್ಞರನ್ನು ಭೇಟಿ ಮಾಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ, "ವಾಸ್ತವವಾಗಿ ತಂತ್ರಜ್ಞರನ್ನು ಭೇಟಿ ಮಾಡಲು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದರೂ, ಲಾಜಿಸ್ಟಿಕ್ ಮತ್ತು ಆರ್ಥಿಕವಾಗಿ, ಅಗತ್ಯ ವೆಚ್ಚಗಳನ್ನು ಪೂರೈಸಲು ಜೆಡಿಎಸ್‌ಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಕನ್ನಡಿಗರು ಸಂಭ್ರಮಿಸುವ ಕರ್ನಾಟಕ ರಾಜ್ಯೋತ್ಸವದ ದಿನವೇ ಯಾತ್ರೆಗೆ ಚಾಲನೆ ನೀಡಲಾಗುವುದು. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎನ್ನುವುದನ್ನು ಯಾತ್ರೆ ಮೂಲಕ ಜನರಿಗೆ ಮನವರಿಕೆ ಮಾಡಲು ಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳಂತೆ ಅಬ್ಬರವಿಲ್ಲದೆ ಯಾತ್ರೆಯ ರೂಪುರೇಷೆಗಳನ್ನು ಶೀಘ್ರ ಬಿಡುಗಡೆ ಮಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ಪಂಚರತ್ನ ರಥಯಾತ್ರೆ ಆಗಸ್ಟ್‌ ತಿಂಗಳು ಆರಂಭವಾಗಬೇಕಿತ್ತು. ಮಳೆಯಿಂದಾಗಿ ಮುಂದೂಡಲಾಗಿತ್ತು. ಕೆಲ ತಿಂಗಳ ಹಿಂದೆ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಮಾವೇಶಗಳು ಯಶಸ್ವಿಯಾಗಿದ್ದವು. ನೀರಾವರಿ ಯೋಜನೆಗಳ ಜಾರಿಗೆ  4 ಲಕ್ಷ ಕೋಟಿ ರು. ಬೇಕಿದೆ. ಯೋಜನೆ ಜಾರಿಗೆ ದೂರದೃಷ್ಟಿಯ ಅಗತ್ಯವಿದೆ. ಈ ಕುರಿತು ಜನರಿಗೆ ಮನವರಿಕೆ ಮಾಡಲಾಗುವುದು’ ಎಂದೂ ಅವರು ವಿವರ ನೀಡಿದರು.

ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನ ‘ಪೇಸಿಎಂ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೆಟ್ಟ ಅಭಿರುಚಿ ಹೊಂದಿರುವ ಇಂತಹ ಪ್ರಚಾರಗಳನ್ನು ನಾನು ಸ್ವಾಗತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಇರಲಿಲ್ಲವೇ? ವಿರೋಧ ಪಕ್ಷಗಳು ಇಂತಹ ಋಣಾತ್ಮಕ ಪ್ರಚಾರದಲ್ಲಿ ತೊಡಗುವ ಬದಲು ಯಾವ ಬದಲಾವಣೆ ತರಲು ಉದ್ದೇಶಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸಬೇಕು,'' ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ