ರಾಹುಲ್ ಗಾಂಧಿ 
ರಾಜಕೀಯ

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ನಾಳೆ ರಾಜ್ಯ ಪ್ರವೇಶ; ಗುಂಡ್ಲುಪೇಟೆಯಲ್ಲಿ ಅದ್ಧೂರಿ ಸಿದ್ಧತೆ

ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. 

ಬೆಂಗಳೂರು: ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. 

ಈಗಾಗಲೇ ಕೇರಳದಲ್ಲಿ 20 ದಿನದ ಪಾದಯಾತ್ರೆ ಮುಗಿಲಿಸಿರುವ ಜೋಡೋ ಯಾತ್ರೆ, ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನ ಸುಮಾರು 511 ಕಿ.ಮೀ ದೂರ ನಡೆಯಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಈ ಯಾತ್ರೆಯನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

25 ರಿಂದ 30 ಸಾವಿರ ಮಂದಿ ಕರ್ನಾಟಕ- ಕೇರಳ ಗಡಿಯಲ್ಲಿ ಸೇರಿ ರಾಹುಲ್ ಗಾಂಧಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ತಯಾರಿ ನಡೆದಿದೆ. ಚಾಮರಾಜನಗರ ನಂತರ ಮೈಸೂರು, ತುಮಕೂರು ಮಾರ್ಗವಾಗಿ ಯಾತ್ರೆ ಮುಂದೆ ಸಾಗಲಿದೆ. ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಮನ ಒಂದಾಗದೇ ಜಗತ್ತಿನಲ್ಲಿ ಯಾವುದೇ ದೊಡ್ಡ ಬದಲಾವಣೆ ಸಾಧ್ಯವಿಲ್ಲ. ಕೇವಲ 5 ವರ್ಷಕ್ಕೊಮ್ಮೆ ಮತ ಹಾಕಿದರೆ ಸಾಲದು, ರಾಜಕಾರಣಿಯಾಗಲಿ, ಮತದಾರರಾಗಲಿ ಸಮಸ್ಯೆಗಳಿಗೆ ಪ್ರತಿದಿನ ಸ್ಪಂದಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT