ರಾಜಕೀಯ

'ಭಾರತ್ ಜೋಡೋ ಯಾತ್ರೆ'ಗೆ ಕೈ ಜೋಡಿಸುವಂತೆ ಮುನಿಯಪ್ಪಗೆ ಮನವಿ: ಬಿ.ಕೆ ಹರಿಪ್ರಸಾದ್, ಪರಮೇಶ್ವರ್ ಮನವೊಲಿಕೆಗೆ ಬಗ್ಗದ ಮಾಜಿ ಸಂಸದ!

Shilpa D

ಬೆಂಗಳೂರು: ಕಾಂಗ್ರೆಸ್ ತೊರೆಯಲು ತುದಿಗಾಲಲ್ಲಿ ನಿಂತಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಕೈ ಜೋಡಿಸುವಂತೆ ಮನವೊಲಿಸಲು ಡಾ .ಜಿ ಪರಮೇಶ್ವರ್ ಮತ್ತು ಬಿ,ಕೆ ಹರಿಪ್ರಸಾದ್ ಅವರನ್ನೊಳಗೊಂಡ ನಿಯೋಗ ಭೇಟಿ ಮಾಡಿದೆ.

ಕೆಲವು ಕಳೆದ ದಿನಗಳಿಂದ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಮುನಿಯಪ್ಪ ಸಕ್ರಿಯವಾಗಿ ಪಾಲ್ಗೊಳ್ಳುತ್ತಿಲ್ಲ, ಹೀಗಾಗಿ ಭಾರತ್ ಜೋಡೋ ಯಾತ್ರೆಗೆ ಬರುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಮುಂದಾಗಿದ್ದಾರೆ.

7 ಬಾರಿ ಸಂಸದರಾಗಿರುವ ಮುನಿಯಪ್ಪ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ, ಅವರು ಪಕ್ಷ ತೊರೆಯುತ್ತಾರೆ ಎನ್ನುವುದು ಸುಳ್ಳು ಸುದ್ದಿ, ಕರಾಳ ದಿನಗಳು ಮುಗಿದು ಹೊಸ ಬೆಳಕು ಮೂಡಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಜಿ ಪರಮೇಶ್ವರ್  ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರ ನಾಮನಿರ್ದೇಶನ ಗೊಂದಲದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ನಾಯಕರು ತಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಹೈಕಮಾಂಡ್ ಮತ್ತು ಸೋನಿಯಾ ಗಾಂಧಿಯವರ ಸೂಚನೆಗಳನ್ನು ಪಾಲಿಸುವುದಾಗಿ ತಿಳಿಸಿದ್ದಾರೆ.

ಮುನಿಯಪ್ಪ ಅವರು ಆರೋಗ್ಯ ಸಚಿವ ಕೆ. ಸುಧಾಕರ್ ಮಧ್ಯಸ್ಥಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿತ್ತು,  ಬೊಮ್ಮಾಯಿ ಅವರು ಮುನಿಯಪ್ಪ ಪರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ, ಆದರೆ ಅವರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆಯೇ ಎಂದು ಬಹಿರಂಗಪಡಿಸಲಿಲ್ಲ.

ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಎಸ್‌ಸಿ (ಎಡ) ಪಕ್ಷಕ್ಕೆ ಸಹಾಯ ಮಾಡುವ ಮುನಿಯಪ್ಪ ಅವರನ್ನೂ ಸೆಳೆಯಲು ಜೆಡಿಎಸ್ ಕೂಡ ಪ್ರಯತ್ನಿಸುತ್ತಿದೆ. ಮುಸ್ಲಿಮರ ಒಂದು ವರ್ಗ ಜೆಡಿಎಸ್ ಪರವಾಗಿದ್ದು, ಇತ್ತೀಚೆಗೆ ಕೋಲಾರದಲ್ಲಿ ನಡೆದ ಸಮುದಾಯದ ಸಮಾವೇಶ ಜನಮನ ಸೆಳೆಯಿತು.

SCROLL FOR NEXT