ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಹಾಸನ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳುವ ಪ್ರಕಾರ ಸೋಮವಾರ ಬೆಳಗ್ಗೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. 

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಗೊಂದಲದಲ್ಲಿರುವ ಹಾಸನ ಕ್ಷೇತ್ರ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮುಂದಿನ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡುತ್ತೇವೆ. ಹಾಸನ ಕ್ಷೇತ್ರದ ಬಂಡಾಯಕ್ಕೆ ಸೊಪ್ಪು ಹಾಕುವ ಪ್ರಶ್ನೆಯೇ ಇಲ್ಲ, ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಭಾವನೆಗಳು ಮುಖ್ಯ, ಕಾರ್ಯಕರ್ತರಿಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವುದಿಲ್ಲ ಎಂದಿದ್ದಾರೆ. 

ಇಂದಿನಿಂದ ವಿವಿಧೆಡೆ ಪ್ರಚಾರ: ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಾಗುವುದು. ಚಾಮರಾಜನಗರ, ಮೈಸೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡದಲ್ಲಿ ಏಪ್ರಿಲ್ 12ರವರೆಗೆ ಪ್ರಚಾರ ನಡೆಸಲಾಗುವುದು. ಏಪ್ರಿಲ್ 13ರಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆಗೆ ಹಲವು ಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು. ಏಪ್ರಿಲ್ 21ರಿಂದ ಏಪ್ರಿಲ್ 24ರವರೆಗೆ ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಪ್ರಚಾರ ಮಾಡುತ್ತೇನೆ. ಎಲ್ಲಿಯೂ ಸಮಯ ವ್ಯರ್ಥ ಮಾಡುವುದಿಲ್ಲ. ಇನ್ನು, ಸಮೀಕ್ಷೆ ವರದಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಗುರಿ ತಲುಪುವುದಕ್ಕೆ ಬೇಕಾದ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT