ಕುಮಾರಸ್ವಾಮಿ-ದೇವೇಗೌಡ 
ರಾಜಕೀಯ

ಹಾಸನ ಜೆಡಿಎಸ್ ಟಿಕೆಟ್ ಪ್ರಹಸನ ಬೆಂಗಳೂರಿನ ದೇವೇಗೌಡರ ನಿವಾಸಕ್ಕೆ ಶಿಫ್ಟ್!

ಹಾಸನದ ಜೆಡಿಎಸ್ ಟಿಕೆಟ್ ವಿವಾದ ಬೆಂಗಳೂರಿನಲ್ಲಿರುವ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ವರ್ಗಾವಣೆಯಾಗಿದೆ. 

ಹಾಸನ​: ಹಾಸನದ ಜೆಡಿಎಸ್ ಟಿಕೆಟ್ ವಿವಾದ ಬೆಂಗಳೂರಿನಲ್ಲಿರುವ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ವರ್ಗಾವಣೆಯಾಗಿದೆ. 

ರಾತ್ರಿಯ ಭೋಜನದ ಬಳಿಕ ಹೆಚ್ ಡಿ ದೇವೇಗೌಡ ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ ಅವರೊಂದಿಗೆ ಚರ್ಚೆ ಮಾಡಿದ್ದು, ತಮ್ಮ ನಿಲುವನ್ನು ಶೀಘ್ರವೇ ಪ್ರಕಟಿಸಲಿದ್ದಾರೆ.

ದೇವೇಗೌಡರ ಆಪ್ತ ವಲಯದ ಪ್ರಕಾರ, ಸ್ವರೂಪ್ ಗೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯ ಹೊಂದಿರುವ ಹೆಚ್ ಡಿ ಕುಮಾರಸ್ವಾಮಿ ಅವರ ಮನವೊಲಿಕೆ ಮಾಡಲಿರುವ ದೇವೇಗೌಡ, ಭವಾನಿ ರೇವಣ್ಣ ಅವರಿಗೆ ಟಿಕೆಟ್ ಘೋಷಿಸುವ ಸಾಧ್ಯತೆ ಇದೆ. 

ಹಾಸನದಲ್ಲಿ ಕಾರ್ಯಕರ್ತರಿಗೇ ಟಿಕೆಟ್ ನೀಡಬೇಕೆಂಬ ಉದ್ದೇಶ ಹೊಂದಿದ್ದ ಹೆಚ್ ಡಿ ಕುಮಾರಸ್ವಾಮಿ ಏಕಾಏಕಿ ಹೆಚ್ ಡಿ ದೇವೇಗೌಡ ಅವರ ನಿರ್ಧಾರಕ್ಕೆ ತಾವು ಬದ್ಧವಾಗಿರುವುದಾಗಿ ಹೇಳಿದ್ದರು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ, ಪಕ್ಷದ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಘೋಷಿಸುವ ಸಾಧ್ಯತೆ ಇದೆ. ಏಕೆಂದರೆ ಪಕ್ಷ ಹೆಚ್ ಪಿ ಸ್ವರೂಪ್ ಗೆ ಟಿಕೆಟ್ ಘೋಷಿಸಿದರೆ, ಭವಾನಿ ರೇವಣ್ಣ ಅವರನ್ನು ಜೆಡಿಎಸ್ ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಎಚ್ಚರಿಕೆ ನೀಡಿದ್ದರು. 

ಹಾಸನ ಕ್ಷೇತ್ರವನ್ನು ರೇವಣ್ಣ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಈ ಹಿಂದೆ ಹಾಲಿ ಶಾಸಕ ಪ್ರೀತಂ ಗೌಡ ತಮ್ಮ ವಿರುದ್ಧ 50 ಸಾವಿರ ಮತಗಳ ಅಂತರದಿಂದ ತಮ್ಮ ವಿರುದ್ಧ ಗೆಲುವು ಸಾಧಿಸುವಂತೆ ಸವಾಲು ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT