ಸಿದ್ದರಾಮಯ್ಯ 
ರಾಜಕೀಯ

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ: ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು: ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಂತ್ರಸ್ತ ಇದ್ರೀಸ್ ಪಾಷಾ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಪುನೀತ್ ಕೆರೆಹಳ್ಳಿ ನೇತೃತ್ವದ ಗೋರಕ್ಷಕರ ಗುಂಪೊಂದು ಆತನನ್ನು ಕೊಂದು ಹಾಕಿತ್ತು.

ಘಟನೆಯನ್ನು ಖಂಡಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಬಿಜೆಪಿ ಗೂಂಡಾ ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿದ್ದು, ಆರಗ ಅವರಿಗೆ ಗೃಹ ಸಚಿವರಾಗಿ ಉಳಿಯುವ ನೈತಿಕ ಹಕ್ಕು ಇಲ್ಲ ಎಂದರು. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಸಮರ್ಥ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಈ ಸಾವಿಗೆ ನೇರ ಹೊಣೆ. ಈ ಅಸಮರ್ಥ ಸರ್ಕಾರದ ಅಡಿಯಲ್ಲಿ ಜನರು ಸುರಕ್ಷತೆ ಮತ್ತು ಭದ್ರತೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಅವರನ್ನು ಮೊದಲು ಸಚಿವ ಸಂಪುಟದಿಂದ ಹೊರಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಅವರೊಂದಿಗೆ ಅನೇಕ ಬಿಜೆಪಿ ನಾಯಕರು ಮತ್ತು ಸಚಿವರಿರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. 

'ಇದು [ಕೊಲೆ] ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸಲು ಮತ್ತು ಮತದಾರರನ್ನು ಧ್ರುವೀಕರಣಗೊಳಿಸಲು ಒಂದು ಸಂಯೋಜಿತ ಕೃತ್ಯದಂತೆ ತೋರುತ್ತಿದೆ' ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT