ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೈ ಹಿಡಿದ ಶಾಸಕ ಎನ್ ವೈ ಗೋಪಾಲಕೃಷ್ಣ 
ರಾಜಕೀಯ

ಕೂಡ್ಲಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.

ಕೂಡ್ಲಿಗೆ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮಅಪಾರ ಬೆಂಬಲಿಗರೊಂದಿಗೆ ಗೋಪಾಲಕೃಷ್ಣ ಕೈ ಹಿಡಿದರು.

ಡಿಕೆ ಶಿವಕುಮಾರ್ ಅವರು ಪಕ್ಷದ ಧ್ವಜವನ್ನು ನೀಡಿ, ಗೋಪಾಲಕೃಷ್ಣ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕಗೊಂಡಿರುವುದರ ಹಿಂದೆ ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

SCROLL FOR NEXT