ಮಹಾದೇವಪ್ಪ, ಅಶ್ವಿನ್ ಕುಮಾರ್ ಮತ್ತು ಡಾ. ರೇವಣ್ಣ 
ರಾಜಕೀಯ

ಟಿ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ: ಜನಪ್ರಿಯ ವೈದ್ಯ ರೇವಣ್ಣಗೆ ಬಿಜೆಪಿ ಗಾಳ!

ವಿರೋಧ ಪಕ್ಷ ಕಾಂಗ್ರೆಸ್ ಸೋಲಿಸಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಹೊಸ ಮುಖಗಳನ್ನು ತರಲು ಪ್ರಯತ್ನಿಸುತ್ತಿದೆ.  ಜನಪ್ರಿಯ ವೈದ್ಯ ರೇವಣ್ಣ ಅವರನ್ನು ಬಿಜೆಪಿಗೆ ಕರೆ ತರಲು ಪಕ್ಷ ಮುಂದಾಗಿದೆ.

ಮೈಸೂರು: ವಿರೋಧ ಪಕ್ಷ ಕಾಂಗ್ರೆಸ್ ಸೋಲಿಸಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಹೊಸ ಮುಖಗಳನ್ನು ತರಲು ಪ್ರಯತ್ನಿಸುತ್ತಿದೆ. ಜನಪ್ರಿಯ ವೈದ್ಯ ರೇವಣ್ಣ ಅವರನ್ನು ಟಿ ನರಸೀಪುರ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಡಾ. ರೇವಣ್ಣ ತನ್ನ ಸರ್ಕಾರಿ ಕೆಲಸವನ್ನು ತೊರೆದಿದ್ದಾರೆ. ಜೆಡಿಎಸ್ ನಿಂದ ಹಾಲಿ ಶಾಸಕ ಅಶ್ವಿನ್ ಕುಮಾರ್ ಕಣಕ್ಕಿಳಿದಿದ್ದು, ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಅವರನ್ನು ಕಾಂಗ್ರೆಸ್ ಘೋಷಿಸಿರುವ ಟಿ ನರಸೀಪುರ ಮೀಸಲು ಕ್ಷೇತ್ರದಿಂದ ರೇವಣ್ಣ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ರೇವಣ್ಣನವರ ಈ ಬಿಜೆಪಿ ಸೇರ್ಪಡೆ ಕೇಸರಿ ಪಕ್ಷದ ನಿರೀಕ್ಷೆಯನ್ನು ಹೆಚ್ಚಿಸಿದ್ದು, ಮೇ 10ರ ಚುನಾವಣೆಯಲ್ಲಿ ತ್ರಿಕೋನ ಹೋರಾಟ ನಡೆಯುವ ಸಾಧ್ಯತೆ ಇದೆ. ನೀಲಸೋಗೆ ಗ್ರಾಮದವರಾದ ರೇವಣ್ಣ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಹಾಗೂ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಸಮಾಜದ ಎಲ್ಲಾ ವರ್ಗಗಳಿಗೆ ಸೇರಿದ ರೋಗಿಗಳಲ್ಲಿ ಅವರು ಗೌರವಾನ್ವಿತ ವೈದ್ಯರಾಗಿದ್ದಾರೆ. ಬಿಜೆಪಿ ಕೋರ್ ಕಮಿಟಿ ಚರ್ಚಿಸಿ ರೇವಣ್ಣ ಅವರ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ ಎಂದು ಮೂಲಗಳು ಖಚಿತಪಡಿಸಿವೆ. ಪಕ್ಷವು ಶೀಘ್ರದಲ್ಲೇ ಪಟ್ಟಿಯನ್ನು ಪ್ರಕಟಿಸಲಿದ್ದು, ಪ್ರಚಾರವನ್ನು ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ ಎಂದು ಸ್ಥಳೀಯ ಬಿಜೆಪಿ ನಾಯಕರು ಭರವಸೆ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?