ಸುರ್ಜೇವಾಲ 
ರಾಜಕೀಯ

ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್

ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು...

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು. ಆದರೆ ಕೆಲವೊಮ್ಮೆ ಐಟಿ-ಇಡಿ ಅಥವಾ ಇತರೆ ಸಂಗತಿಗಳು ಇದರ ಹಿಂದೆ ಕೆಲಸ ಮಾಡುತ್ತವೆ ಎಂದು ವ್ಯಂಗ್ಯವಾಡಿದೆ.

ಚಿತ್ರನಟರು ಯಾರನ್ನು ಬೆಂಬಲಿಸಬೇಕೆಂದು ಆಯ್ಕೆ ಮಾಡಿಕೊಳ್ಳಲು ಅವರು ಸ್ವತಂತ್ರರು. ಆದರೆ, ಕೆಲವೊಮ್ಮೆಐಟಿ, ಇಡಿ ಅಥವಾ ಬೇರೆ ಕಾರಣಗಳು ಇರುತ್ತವೆ. ಕರ್ನಾಟಕದಲ್ಲಿ ಬಿಜೆಪಿಯ ದಿವಾಳಿತನ ಸ್ಪಷ್ಟವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಟ್ವೀಟ್ ಮಾಡಿದ್ದಾರೆ.

ಈಗ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಮಾತುಗಳನ್ನು ಕೇಳಲು ಯಾರೂ ಸುಳಿಯದ ಕಾರಣ ಅವರು ಈಗ ಪ್ರೇಕ್ಷಕರನ್ನು ಸೆಳೆಯಲು ಚಲನಚಿತ್ರ ತಾರೆಯರನ್ನು ಅವಲಂಬಿಸಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು ಸಿನಿಮಾ ತಾರೆಯರಲ್ಲ ಎಂದು ಸುರ್ಜೇವಾಲ ಅವರು ಟಾಂಗ್ ನೀಡಿದ್ದಾರೆ.

ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬೊಮ್ಮಾಯಿ, ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT