ಸುರ್ಜೇವಾಲ 
ರಾಜಕೀಯ

ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್

ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು...

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು. ಆದರೆ ಕೆಲವೊಮ್ಮೆ ಐಟಿ-ಇಡಿ ಅಥವಾ ಇತರೆ ಸಂಗತಿಗಳು ಇದರ ಹಿಂದೆ ಕೆಲಸ ಮಾಡುತ್ತವೆ ಎಂದು ವ್ಯಂಗ್ಯವಾಡಿದೆ.

ಚಿತ್ರನಟರು ಯಾರನ್ನು ಬೆಂಬಲಿಸಬೇಕೆಂದು ಆಯ್ಕೆ ಮಾಡಿಕೊಳ್ಳಲು ಅವರು ಸ್ವತಂತ್ರರು. ಆದರೆ, ಕೆಲವೊಮ್ಮೆಐಟಿ, ಇಡಿ ಅಥವಾ ಬೇರೆ ಕಾರಣಗಳು ಇರುತ್ತವೆ. ಕರ್ನಾಟಕದಲ್ಲಿ ಬಿಜೆಪಿಯ ದಿವಾಳಿತನ ಸ್ಪಷ್ಟವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಟ್ವೀಟ್ ಮಾಡಿದ್ದಾರೆ.

ಈಗ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಮಾತುಗಳನ್ನು ಕೇಳಲು ಯಾರೂ ಸುಳಿಯದ ಕಾರಣ ಅವರು ಈಗ ಪ್ರೇಕ್ಷಕರನ್ನು ಸೆಳೆಯಲು ಚಲನಚಿತ್ರ ತಾರೆಯರನ್ನು ಅವಲಂಬಿಸಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು ಸಿನಿಮಾ ತಾರೆಯರಲ್ಲ ಎಂದು ಸುರ್ಜೇವಾಲ ಅವರು ಟಾಂಗ್ ನೀಡಿದ್ದಾರೆ.

ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬೊಮ್ಮಾಯಿ, ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT