ಪ್ರಕಾಶ್ ರಾಜ್ 
ರಾಜಕೀಯ

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?

ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಈಗಾಗಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಸುದೀಪ್ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕಮಲ ಪಕ್ಷ ಸೇರಲಿದ್ದಾರೆ ಎನ್ನುವ ವಿಚಾರ ವರದಿಯಾಗುತ್ತಿದೆ.

ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇಂದು ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಇದು ಹತಾಶ ಬಿಜೆಪಿಯಿಂದ ಹರಡಿದ ಸುಳ್ಳು ಸುದ್ದಿ ಎಂದು ನಾನು ಬಲವಾಗಿ ನಂಬುತ್ತೇನೆ. ಕಿಚ್ಚ ಸುದೀಪ್ ಹೆಚ್ಚು ಸಂವೇದನಾಶೀಲ ನಾಗರಿಕರಾಗಿದ್ದು, ಇದಕ್ಕೆ ಬಲಿಯಾಗುವುದಿಲ್ಲ ಎಂದೇ ನಾನು ಭಾವಿಸುತ್ತೇನೆ. ಕರ್ನಾಟಕದಲ್ಲಿ ಸೋಲುವ ಭಯದಿಂದ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಇದಾಗಿರಲಿ. ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ' ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಇಂದು (ಏಪ್ರಿಲ್ 5) ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸುದ್ದಿಸಂಸ್ಥೆ ಎಎನ್ಐ ವರದಿ ಪ್ರಕಾರ, ಕಿಚ್ಚ ಸುದೀಪ್  ಇಂದು ಮಧ್ಯಾಹ್ನ 1.30ರಿಂದ 2.30ರ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ಬಾವುಟ ಹಿಡಿಯಲಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಮ್ಮುಖದಲ್ಲಿ ಕಿಚ್ಚ ಸುದೀಪ್ ಬಿಜೆಪಿಗೆ ಸೇರುತ್ತಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಈ ಎಲ್ಲಾ ವದಂತಿಗಳ ನಡುವೆ ಸುದೀಪ್ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗಿದ್ದು, ಈ ವೇಳೆ ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ, ತಮ್ಮ ರಾಜಕೀಯ ನಿಲುವು ಪ್ರಕಟಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT