ಕಿಚ್ಚ ಸುದೀಪ್ 
ರಾಜಕೀಯ

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಈ ಮಧ್ಯೆ ನಿನ್ನೆ ಅವರು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ ನಂತರ ಶಿವಮೊಗ್ಗ ಮೂಲದ ಅಡ್ವೊಕೇಟ್ ಕೆ ಪಿ ಶ್ರೀಪಾಲ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ನಟ ಸುದೀಪ್ ಅವರ ಚಿತ್ರಗಳು, ಟಿ ವಿಶೋಗಳು, ಜಾಹೀರಾತುಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. 

ಸುದೀಪ್ ಅವರ ಟಿವಿ ಶೋಗಳು, ಚಿತ್ರಗಳನ್ನು ಪ್ರಸಾರ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಸಾರ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಪ್ರಸಾರಕ್ಕೆ ತಡೆಯೊಡ್ಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT