ನಿಖಿಲ್ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡ ಮಹಿಳೆ 
ರಾಜಕೀಯ

ಬಂದವರಿಗೆಲ್ಲಾ ನಾವು ಇದೇ ಮಾತು ಹೇಳಿ ಕಳಿಸ್ತಿದ್ದೇವೆ, ಈ ಬಾರಿ ನಾವು ಓಟು ಹಾಕುವುದೇ ಇಲ್ಲ: ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ!

ಕಳೆದ ಬಾರಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತರು. 

ರಾಮನಗರ: ಕಳೆದ ಬಾರಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತರು. 

ಈ ಬಾರಿ ಅವರು ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ. ಅದಕ್ಕೆ ಕ್ಷೇತ್ರದಲ್ಲಿ ಭಾರೀ ಪ್ರಚಾರ ನಡೆಸುತ್ತಿದ್ದಾರೆ.

ರಾಮನಗರ ಜಿಲ್ಲೆ ಜೆಡಿಎಸ್ ನ ಭದ್ರಕೋಟೆ ಎಂದೇ ಹೇಳಲಾಗುತ್ತಿದೆ. ಆದರೆ ರಾಜಕೀಯದಲ್ಲಿ ಕೆಲವೊಮ್ಮೆ ಮತದಾರರ ಒಲವು ಯಾರ ಕಡೆಗಿರುತ್ತದೆ, ಹೇಗೆ ಮತಗಳು ಹಂಚಿಕೆಯಾಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಇಂದು ತಮ್ಮ ಬೆಂಬಲಿಗರೊಂದಿಗೆ ರಾಮನಗರದಲ್ಲಿ ಪ್ರಚಾರಕ್ಕೆ ಹೋಗಿದ್ದ ನಿಖಿಲ್ ಕುಮಾರಸ್ವಾಮಿಗೆ ಸ್ಥಳೀಯರಿಂದ ಅದರಲ್ಲೂ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ.

ಚರಂಡಿ, ರಸ್ತೆಯ ವ್ಯವಸ್ಥೆಯಿಲ್ಲ, ನಮಗೆ ಕುಡಿಯಲು ನೀರಿನ ವ್ಯವಸ್ಥೆಯಿಲ್ಲ, ಮನೆಯಲ್ಲಿ ಗಂಡಸರಿಲ್ಲ, ಶೌಚಾಲಯ, ಶುಚಿತ್ವದ ಸಮಸ್ಯೆಯಿದೆ. ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲ. ನಿಮ್ಮ ತಾಯಿಯವರು ಸೌಲಭ್ಯ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆಯೇ ಹೊರತು ಮಾಡಿಕೊಟ್ಟಿಲ್ಲ. ಇಲ್ಲಿಗೆ ಯಾರು ಓಟು ಕೇಳಲು ಬಂದರೂ ಬರಬೇಡಿ ಎಂದು ನಾವು ಹೇಳುತ್ತೇವೆ. ಈ ಬಾರಿ ನಾವು ಯಾರಿಗೂ ಓಟು ಹಾಕುವುದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಅನಿತಾ ಕುಮಾರಸ್ವಾಮಿಯವರು ಬಂದು ಮೂರು ಸಲ ಗುದ್ದಲಿ ಪೂಜೆ ಮಾಡಿಬಿಟ್ಟು ಹೋಗಿದ್ದಾರೆ ಹೊರತು ಕೆಲಸವಾಗಿಲ್ಲ ಎಂದು ಆರೋಪಿಸಿದರು. ಕೊನೆಗೆ ನಿಖಿಲ್ ಕುಮಾರಸ್ವಾಮಿಯವರು ಮಹಿಳೆಯರನ್ನು ಸಮಾಧಾನಪಡಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT