ಹೆಚ್ ಡಿ ರೇವಣ್ಣ 
ರಾಜಕೀಯ

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ: ಹೆಚ್ ಡಿ ರೇವಣ್ಣ

ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ.

ಹೊಳೆನರಸೀಪುರ: ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ. 

ಹೊಳೆನರಸೀಪುರ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ರಾಜಕೀಯದಲ್ಲಿ ಆರು ದಶಕಗಳ ಅನುಭವವಿರುವ ಗೌಡರು ಉಮೇದುವಾರಿಕೆ ನಿರ್ಧರಿಸಲಿದ್ದಾರೆ. ಈ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಗೆ ದೊಡ್ಡ ಹೊಡೆತ ನೀಡಿದ ಹೆಚ್.ಡಿ.ರೇವಣ್ಣ ಅವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಟಿಕೆಟ್ಗಳನ್ನು ಹೆಚ್.ಡಿ ದೇವೇಗೌಡರು ನಿರ್ಧರಿಸುತ್ತಾರೆ ಎಂದು ಹೇಳಿದರು. ಹೆಚ್ ಡಿಕೆ ಪ್ರಕಾರ ಪಕ್ಷದ ಕಾರ್ಯಕರ್ತ ಎಂದರೆ ಯಾರು ಎಂದು ಹೆಚ್.ಡಿ ರೇವಣ್ಣ ಪ್ರಶ್ನಿಸಿದ್ದಾರೆ. ದೇವೇಗೌಡರು ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನು ನಿರ್ಧರಿಸಿದ್ದಾರೆ ಎಂದರು.

ಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಹಾಸನದ ಜನರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಸಚಿವ ರೇವಣ್ಣ, ಎರಡು ವಿಧಾನಸಭಾ ಕ್ಷೇತ್ರಗಳಿಂದ ತಾನು ಎಂದಿಗೂ ಸ್ಪರ್ಧಿಸುವುದಿಲ್ಲ. ಐದು ಚುನಾವಣೆಗಳಿಂದ ತಮ್ಮನ್ನು ಬೆಂಬಲಿಸುತ್ತಿರುವ ಹೊಳೆನರಸೀಪುರದಿಂದ ಮಾತ್ರ ಚುನಾವಣೆಗೆ ನಿಲ್ಲುತ್ತೇನೆ. ಹೊಳೆನರಸೀಪುರ ಕ್ಷೇತ್ರದ ಜನರನ್ನು ತಮ್ಮನ್ನು ಎಂದಿಗೂ ನಿರ್ಲಕ್ಷಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT