ಹೆಚ್ ಡಿ ರೇವಣ್ಣ 
ರಾಜಕೀಯ

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ: ಹೆಚ್ ಡಿ ರೇವಣ್ಣ

ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ.

ಹೊಳೆನರಸೀಪುರ: ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ. 

ಹೊಳೆನರಸೀಪುರ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ರಾಜಕೀಯದಲ್ಲಿ ಆರು ದಶಕಗಳ ಅನುಭವವಿರುವ ಗೌಡರು ಉಮೇದುವಾರಿಕೆ ನಿರ್ಧರಿಸಲಿದ್ದಾರೆ. ಈ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಗೆ ದೊಡ್ಡ ಹೊಡೆತ ನೀಡಿದ ಹೆಚ್.ಡಿ.ರೇವಣ್ಣ ಅವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಟಿಕೆಟ್ಗಳನ್ನು ಹೆಚ್.ಡಿ ದೇವೇಗೌಡರು ನಿರ್ಧರಿಸುತ್ತಾರೆ ಎಂದು ಹೇಳಿದರು. ಹೆಚ್ ಡಿಕೆ ಪ್ರಕಾರ ಪಕ್ಷದ ಕಾರ್ಯಕರ್ತ ಎಂದರೆ ಯಾರು ಎಂದು ಹೆಚ್.ಡಿ ರೇವಣ್ಣ ಪ್ರಶ್ನಿಸಿದ್ದಾರೆ. ದೇವೇಗೌಡರು ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನು ನಿರ್ಧರಿಸಿದ್ದಾರೆ ಎಂದರು.

ಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಹಾಸನದ ಜನರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಸಚಿವ ರೇವಣ್ಣ, ಎರಡು ವಿಧಾನಸಭಾ ಕ್ಷೇತ್ರಗಳಿಂದ ತಾನು ಎಂದಿಗೂ ಸ್ಪರ್ಧಿಸುವುದಿಲ್ಲ. ಐದು ಚುನಾವಣೆಗಳಿಂದ ತಮ್ಮನ್ನು ಬೆಂಬಲಿಸುತ್ತಿರುವ ಹೊಳೆನರಸೀಪುರದಿಂದ ಮಾತ್ರ ಚುನಾವಣೆಗೆ ನಿಲ್ಲುತ್ತೇನೆ. ಹೊಳೆನರಸೀಪುರ ಕ್ಷೇತ್ರದ ಜನರನ್ನು ತಮ್ಮನ್ನು ಎಂದಿಗೂ ನಿರ್ಲಕ್ಷಿಸುವುದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT