ಹೆಚ್ ಡಿ ರೇವಣ್ಣ 
ರಾಜಕೀಯ

ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ: ಹೆಚ್ ಡಿ ರೇವಣ್ಣ

ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ.

ಹೊಳೆನರಸೀಪುರ: ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ. 

ಹೊಳೆನರಸೀಪುರ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ರಾಜಕೀಯದಲ್ಲಿ ಆರು ದಶಕಗಳ ಅನುಭವವಿರುವ ಗೌಡರು ಉಮೇದುವಾರಿಕೆ ನಿರ್ಧರಿಸಲಿದ್ದಾರೆ. ಈ ವಿಚಾರದಲ್ಲಿ ಹೆಚ್.ಡಿ.ದೇವೇಗೌಡರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಗೆ ದೊಡ್ಡ ಹೊಡೆತ ನೀಡಿದ ಹೆಚ್.ಡಿ.ರೇವಣ್ಣ ಅವರು ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಟಿಕೆಟ್ಗಳನ್ನು ಹೆಚ್.ಡಿ ದೇವೇಗೌಡರು ನಿರ್ಧರಿಸುತ್ತಾರೆ ಎಂದು ಹೇಳಿದರು. ಹೆಚ್ ಡಿಕೆ ಪ್ರಕಾರ ಪಕ್ಷದ ಕಾರ್ಯಕರ್ತ ಎಂದರೆ ಯಾರು ಎಂದು ಹೆಚ್.ಡಿ ರೇವಣ್ಣ ಪ್ರಶ್ನಿಸಿದ್ದಾರೆ. ದೇವೇಗೌಡರು ಮೂರು ತಿಂಗಳ ಹಿಂದೆಯೇ ಅಭ್ಯರ್ಥಿಯನ್ನು ನಿರ್ಧರಿಸಿದ್ದಾರೆ ಎಂದರು.

ಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಹಾಸನದ ಜನರು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಮಾಜಿ ಸಚಿವ ರೇವಣ್ಣ, ಎರಡು ವಿಧಾನಸಭಾ ಕ್ಷೇತ್ರಗಳಿಂದ ತಾನು ಎಂದಿಗೂ ಸ್ಪರ್ಧಿಸುವುದಿಲ್ಲ. ಐದು ಚುನಾವಣೆಗಳಿಂದ ತಮ್ಮನ್ನು ಬೆಂಬಲಿಸುತ್ತಿರುವ ಹೊಳೆನರಸೀಪುರದಿಂದ ಮಾತ್ರ ಚುನಾವಣೆಗೆ ನಿಲ್ಲುತ್ತೇನೆ. ಹೊಳೆನರಸೀಪುರ ಕ್ಷೇತ್ರದ ಜನರನ್ನು ತಮ್ಮನ್ನು ಎಂದಿಗೂ ನಿರ್ಲಕ್ಷಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT