ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಯುವಕರಿಗಾಗಿ ಹಿರಿಯರು ಜಾಗ ಖಾಲಿ ಮಾಡಬೇಕು, ಇದು ಬಿಜೆಪಿ ಸಂಸ್ಕೃತಿ: ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್. ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ.

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ಸಿ. ನಾಗೇಶ್, ಆರ್. ಅಶೋಕ್, ಎಸ್, ಸುರೇಶ್ ಕುಮಾರ್ ಸೇರಿದಂತೆ 22 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಮಾತುಗಳು ಕೇಳಿಬರುತ್ತಿವೆ.

ಈ ನಿಟ್ಟಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಕೆ.ಎಸ್. ಈಶ್ವರಪ್ಪ, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳ್ಳುವುದಾಗಿ ಹೇಳಿದ್ದಾರೆ. ಇನ್ನೂಂದೆಡೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಹೇಳಿದ್ದರೂ ಚುನಾವಣೆಗೆ ಸ್ಪರ್ಧಿಸುವುದಾಗಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 

ಈ ಕುರಿತು ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ಈ ಹಿಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಈಶ್ವರಪ್ಪ ಹೇಳಿದ್ದರು.ಆದರೆ ಅವರ ಅನುಭವ ಬೇಕಿರುವುದರಿಂದ ಸ್ಪರ್ಧಿಸುವಂತೆ ಹೇಳಿದ್ದೆವು, ಈಗ ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಹೈಕಮಾಂಡ್ ನಿರ್ಧಾರ ಒಂದು ನಿರ್ಧಿಷ್ಟ ವಯಸ್ಸಿನ ನಂತರ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆದು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ಸಂದೇಶ ನೀಡಿದೆ. ಇದು ಕೇಂದ್ರ ಹಾಗೂ ರಾಜ್ಯಗಳಲ್ಲಿರುವ ಬಿಜೆಪಿ ಸಂಸ್ಕೃತಿ ಎಂದು ತಿಳಿಸಿದರು.

ಹಲವು ಸುತ್ತಿನ ಮಾತುಕತೆಯ ನಂತರ ಎಲ್ಲವನ್ನು ನಿರ್ಧರಿಸಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇಂದು ಸಂಜೆಯೊಳಗೆ ಸುಮಾರು 150 ಸ್ಥಾನಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT