ಜೆಡಿಎಸ್ ನಾಯಕ ರೇವಣ್ಣ 
ರಾಜಕೀಯ

ದೇವೇಗೌಡರು ಮಾತ್ರ ನಮಗೆ ಸರ್ವೊಚ್ಛ ನಾಯಕ: ಎಚ್ ಡಿಕೆಗೆ ರೇವಣ್ಣ ಟಾಂಗ್

ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಅದು ನನಗೆ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಮಾತ್ರ ಗೊತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಬುಧವಾರ ಹೇಳಿದ್ದಾರೆ.

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಅದು ನನಗೆ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಮಾತ್ರ ಗೊತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ಬುಧವಾರ ಹೇಳಿದ್ದಾರೆ.

ಇಂದು ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ರೇವಣ್ಣ ಅವರು, ದೇವೇಗೌಡರು ಮಾತ್ರ ನಮಗೆ ಸರ್ವೊಚ್ಛ ನಾಯಕರು. ನಾನು ಈಗಾಗಲೇ ಅವರ ಬಳಿ ಹೇಳಿದ್ದೇನೆ. ಅವರು ಏನು ಹೇಳುತ್ತಾರೆ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ, ತಮ್ಮ ಸಹೋದರ, ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಅವರಿಗೆ ಟಾಂಗ್​ ನೀಡಿದ್ದಾರೆ.

ದೇವೇಗೌಡರು ಪ್ರಧಾನಿ ಆದಾಗ ಮಾಡಿದ ಅಭಿವೃದ್ಧಿಯಿಂದಾಗಿ ಈಗ ಗಾರ್ಮೆಂಟ್ಸ್​ಗಳಲ್ಲಿ 60 ಸಾವಿರ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲೂ ಕೂಡ 15 ಸಾವಿರ ಮಹಿಳೆಯರಿಗೆ ಉದ್ಯೋಗ ಕೊಡುವ ಗಾರ್ಮೆಂಟ್ಸ್ ತರುತ್ತೇವೆ ಎಂದರು.

ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ. ನಮ್ಮ ಪಕ್ಷಕ್ಕೆ 123 ಸ್ಥಾನ ಬರುತ್ತೆ. ಇವತ್ತೇ ಬರೆದಿಟ್ಟುಕೊಳ್ಳಿ ಎಂದು ರೇವಣ್ಣ ಭವಿಷ್ಯ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ