ಸ್ವರೂಪ್ ಹಾಗೂ ಭವಾನಿ ರೇವಣ್ಣ. 
ರಾಜಕೀಯ

ವಿಧಾನಸಭಾ ಚುನಾವಣೆ: ಹಾಸನ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಭವಾನಿ ರೇವಣ್ಣ, ಸ್ವರೂಪ್ ಮುಂದು!

ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಎಚ್‌ಡಿ ರೇವಣ್ಣ ಮುಂದುವರೆದಿದ್ದು, ಇದರ ನಡುವಲ್ಲೇ ಭವಾನಿ ರೇವಣ್ಣ ಹಾಗೂ ಎಚ್‌ಪಿ ಸ್ವರೂಪ್ ಇಬ್ಬರೂ ಒಂದೇ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಹಾಸನ: ಹಾಸನ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಎಚ್‌ಡಿ ರೇವಣ್ಣ ಮುಂದುವರೆದಿದ್ದು, ಇದರ ನಡುವಲ್ಲೇ ಭವಾನಿ ರೇವಣ್ಣ ಹಾಗೂ ಎಚ್‌ಪಿ ಸ್ವರೂಪ್ ಇಬ್ಬರೂ ಒಂದೇ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಭವಾನಿ ರೇವಣ್ಣ ಹಾಗೂ ಸ್ವರೂಪ್ ಇಬ್ಬರೂ ಕ್ರಮವಾಗಿ ಏಪ್ರಿಲ್ 14 ಮತ್ತು ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

ನಾಮಪತ್ರ ಸಲ್ಲಿಸುವ ವೇಳೆ ಸ್ವರೂಪ್ ಅವರು, ತಮ್ಮ ಬೆಂಬಲಿಗರೊಂದಿಗೆ ಮೆಗಾ ರ್ಯಾಲಿಗಳನ್ನು ನಡೆಸಲು ಚಿಂತನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಒಕ್ಕಲಿಗರ ಉಪಪಂಗಡವಾದ ದಾಸ ಒಕ್ಕಲಿಗ ಸಮುದಾಯದ 30,000 ಬೆಂಬಲಿಗರನ್ನು ರ್ಯಾಲಿಗೆ ಕರೆತರಲು ಸ್ವರೂಪ್ ಯೋಜಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉಭಯ ಬಣಗಳ ನಾಯಕರು ಸರಣಿ ಸಭೆ ನಡೆಸಿ, ಜೆಡಿಎಸ್ ವಲಯದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾರ್ಯತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ.

ಭವಾನಿ ಅವರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿರುವ ಕುಮಾರಸ್ವಾಮಿ, ಬೃಹತ್ ಸಮಾವೇಶ ನಡೆಸುವ ಮೂಲಕ ಪ್ರತಿಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಭವಾನಿ ಬಣಕ್ಕೆ ಪ್ರಬಲ ಸಂದೇಶ ರವಾನಿಸುವಂತೆ ಸ್ವರೂಪ್ ಅವರಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದ್ದು, ಈ ನಡುವೆ ಭವಾನಿ ಕೂಡ ಮೆಗಾ ರ್ಯಾಲಿ ನಡೆಸಲು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ.

ಹಳೇ ಮೈಸೂರು ಭಾಗದ ಹಾಸನ ಜೆಡಿಎಸ್‌ ಭದ್ರಕೋಟೆ. ಈ ಭದ್ರಕೋಟೆಯಲ್ಲಿ ಕಳೆದ ಚುನಾವಣೆಯಲ್ಲಿ ಪ್ರೀತಂ ಗೌಡ ಕಮಲ ಅರಳಿಸಿದ್ದರು. ಕಮಲ ಅರಳಿದ್ದೇ ತಡ ಪ್ರೀತಂ ಗೌಡರನ್ನು ಈ ಬಾರಿ ಸೋಲಿಸಲು ಜೆಡಿಎಸ್‌ ಪಣ ತೊಟ್ಟಿದೆ. ಆದರೆ ಚುನಾವಣೆಯ ಯುದ್ಧಕ್ಕೆ ಧುಮುಕುವ ಮೊದಲು ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಕಗ್ಗಂಟು ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ