ಮಾಡಾಲ್ ವಿರೂಪಕ್ಷಪ್ಪ- ಎಂಪಿ ಕುಮಾರಸ್ವಾಮಿ 
ರಾಜಕೀಯ

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಮಾಡಾಳ್, ಕುಮಾರಸ್ವಾಮಿ ಸೇರಿ 7 ಶಾಸಕರಿಗೆ ಕೈ ತಪ್ಪಿದ ಟಿಕೆಟ್!

ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2 ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ. 

ನವದೆಹಲಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2 ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ. 

ಬಿಜೆಪಿಯ 2 ನೇ ಪಟ್ಟಿ ಏ.13 ರಂದು ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಇಂದು ರಾತ್ರಿ 11:00 ಗಂಟೆಗೆ 2 ನೇ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದರೆ, 2 ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. 

ಇತ್ತೀಚೆಗೆ ಹಗರಣವೊಂದರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ತಪ್ಪಿದ್ದು, ಆ ಕ್ಷೇತ್ರದಿಂದ ಶಿವಕುಮಾರ್ ಎಂಬುವವರಿಗೆ ಟಿಕೆಟ್ ನೀಡಲಾಗಿದೆ. 

ಇನ್ನು ಮೂಡಿಗೆರೆ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿಗೂ ಟಿಕೆಟ್ ಕೈತಪ್ಪಿದ್ದು, ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. 

2 ನೇ ಪಟ್ಟಿಯಲ್ಲಿ ಟಿಕೆಟ್ ಕಳೆದುಕೊಂಡ 5 ಹಾಲಿ ಶಾಸಕರು!

  1. ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ
  2. ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
  3. ಕಲಘಟಗಿ ಶಾಸಕ ನಿಂಬಣ್ಣನವರ್ ಲಿಂಗಣ್ಣ
  4. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ
  5. ಹಾವೇರಿ ಶಾಸಕ ನೆಹರು ಓಲೆಕಾರ್
  6. ಮಾಯಕೊಂಡ ಶಾಸಕ ಎನ್ ಲಿಂಗಣ್ಣ
  7. ಗುರ್ಮಿಠಲ್ ಶಾಸಕ ನಾಗನಗೌಡ ಕಂದಕೂರ್

2 ನೇ ಪಟ್ಟಿಯಲ್ಲಿ ಟಿಕೆಟ್ ಪಡೆದ ಅಭ್ಯರ್ಥಿಗಳ ವಿವರ

  1. ದೇವರಹಿಪ್ಪರಗಿ-ಸೋಮನಗೌಡ ಪಾಟೀಲ್
  2. ಬಸವನಬಾಗೇವಾಡಿ -ಎಸ್ .ಕೆ.ಬೆಳ್ಳುಬ್ಬಿ
  3. ಇಂಡಿ-ಕಾಸಗೌಡ ಬಿರಾದಾರ್
  4. ಗುರುಮಿಠಕಲ್-ಲಲಿತ ಅನಪೂರ್
  5. ಬೀದರ್-ಈಶ್ವರ್ ಸಿಂಗ್ ಠಾಕೂರ್
  6. ಭಾಲ್ಕಿ -ಪ್ರಕಾಶ್ ಖಂಡ್ರೆ
  7. ಗಂಗಾವತಿ -ಪರಣ್ಣ ಮುನವಳ್ಳಿ
  8. ಕಲಘಟಗಿ-ನಾಗರಾಜ್ ಛಬ್ಬಿ
  9. ಹಾನಗಲ್-ಶಿವರಾಜ್ ಸಜ್ಜನರ್
  10. ಹಾವೇರಿ -ಗವಿಸಿದ್ದಪ್ಪ ದ್ಯಾಮಣ್ಣ ನವರ್
  11. ಹರಪನಹಳ್ಳಿ-ಕರುಣಾಕರ ರೆಡ್ಡಿ
  12. ದಾವಣಗೆರೆ ಉತ್ತರ-ಲೋಕೀಕೆರೆ ನಾಗರಾಜ್
  13. ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
  14. ಮಾಯಕೊಂಡ -ಬಸವರಾಜ್ ನಾಯ್ಕ್
  15. ಚನ್ನಗಿರಿ-ಶಿವಕುಮಾರ್
  16. ಬೈಂದೂರು -ಗುರುರಾಜ್ ಗಂಟಿಹೊಳೆ
  17. ಮೂಡಿಗೆರೆ-ದೀಪಕ್ ದೊಡ್ಡಯ್ಯ
  18. ಗುಬ್ಬಿ -ಎಸ್.ಡಿ.ದಿಲೀಪ್ ಕುಮಾರ್
  19. ಶಿಡ್ಲಘಟ್ಟ- ರಾಮಚಂದ್ರ ಗೌಡ
  20. ಕೆಜಿಎಫ್ -ಅಶ್ವಿನಿ ಸಂಪಂಗಿ
  21. ಶ್ರವಣಬೆಳಗೊಳ -ಚಿದಾನಂದ
  22. ಅರಸೀಕೆರೆ-ಜಿ.ಬಿ.ಬಸವರಾಜು
  23. ಹೆಗ್ಗಡದೇವನಕೋಟೆ-ಕೃಷ್ಣ ನಾಯ್ಕ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT