ಬಸವರಾಜ ಬೊಮ್ಮಾಯಿ 
ರಾಜಕೀಯ

ಬಿಜೆಪಿಯಲ್ಲಿ 'ಬಂಡಾಯ'ದ ಬಿರುಗಾಳಿ: ಶೀಘ್ರವೇ ಭಿನ್ನಮತ ಶಮನ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಬದಲಾವಣೆ ಸಹಜ, ಕೆಲವೊಮ್ಮೆ ಹೀಗಾಗುತ್ತೆ. ಅಸಮಾಧಾನ ಇರುವವರ ಮನವೊಲಿಸುತ್ತೇವೆ. ಪಕ್ಷದಲ್ಲಿನ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಬಲಿಷ್ಠರಾಗಿದ್ದು, ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬಹುತೇಕ ಕಡೆ ಪಕ್ಷದ ಭಿನ್ನಾಭಿಪ್ರಾಯ ಶಮನವಾಗಲಿದೆ ಎಂದು ಬೊಮ್ಮಾಯಿ ಹೇಳಿದರು. 

ಹೈಕಮಾಂಡ್ ಅತೃಪ್ತರ ಜೊತೆ ಮಾತನಾಡುತ್ತಿದೆ. ಎಲ್ಲ ನಾಯಕರ ಜತೆ ಮಾತನಾಡಿದ್ದೇನೆ. ಶೀಘ್ರದಲ್ಲಿಯೇ ವ್ಯತ್ಯಾಸ ಬಗೆಹರಿಯುವ ವಿಶ್ವಾಸವಿದೆ. ಸವದಿ ಹಿರಿಯರಾಗಿದ್ದು, ಸುದೀರ್ಘ ಕಾಲದಿಂದ ರಾಜಕೀಯದಲ್ಲಿದ್ದಾರೆ. ಆ ಕ್ಷೇತ್ರಕ್ಕಾಗಿ ಒತ್ತಡವೂ ಇದೆ, ಸರಿಹೋಗಲು ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ನಲ್ಲಿ 60 ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ, ಈಗ ಪಕ್ಷವು ಬೇರೆ ಪಕ್ಷಗಳಿಂದ ನಾಯಕರನ್ನು ಸೇರಿಸಿಕೊಳ್ಳುವ ಚಿಂತನೆ ನಡೆಸುತ್ತಿದೆ. ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಪಿಸಿದರು.

ಇದಕ್ಕೂ ಮುನ್ನ, ಮೇ 10 ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಹಾಲಿ ಸಚಿವ ಮತ್ತು ಆರು ಬಾರಿ ಬಿಜೆಪಿ ಶಾಸಕರಾಗಿರುವ ಅಂಗಾರ ಎಸ್ ಅವರು, ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ ಮತ್ತು ರಾಜಕೀಯ ಚಟುವಟಿಕೆಯಿಂದ ನಿರ್ಗಮಿಸುವುದಾಗಿ ಘೋಷಿಸಿದರು.

ಬಿಜೆಪಿ ಏಪ್ರಿಲ್ 11 ರಂದು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರನ್ನು ಮತ್ತು ಏಪ್ರಿಲ್ 12 ರಂದು ಎರಡನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತು. ಎರಡೂ ಪಟ್ಟಿಗಳಲ್ಲಿ ಅಂಗಾರ ಅವರ ಹೆಸರು ನಾಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT