ವೈ.ಎಸ್.ವಿ ದತ್ತಾ, ಹೆಚ್ ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಮತ್ತಿತರರು 
ರಾಜಕೀಯ

ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಜೆಡಿಎಸ್ ಗೆ ವಾಪಸ್; ಕಡೂರಿನಿಂದ ಸ್ಪರ್ಧೆ!

ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಮತ್ತೆ  ಜೆಡಿಎಸ್ ಗೆ ಮರಳಿದ್ದಾರೆ.

ಕಡೂರು: ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಮತ್ತೆ  ಜೆಡಿಎಸ್ ಗೆ ಮರಳಿದ್ದಾರೆ.

ಕಾಂಗ್ರೆಸ್ ನಿಂದ ಟಿಕೆಟ್ ಸಿಗದೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದ ದತ್ತಾ ಅವರು ಇಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ವಾಪಸ್ಸಾದರು. 

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಕಡೂರಿನ ಜೆಡಿಎಸ್ ಅಭ್ಯರ್ಥಿಯಾಗಿ ವೈ.ಎಸ್.ವಿ.ದತ್ತಾ ಸ್ಪರ್ಧಿಸಲಿದ್ದಾರೆ. ನಮ್ಮ ಕುಟುಂಬ, ಪಕ್ಷ ದತ್ತ ಅವರ ಜೊತೆ ಇದ್ದು, ನಾಮಪತ್ರ ಸಲ್ಲಿಸುವಾಗ ಖುದ್ದು ಹಾಜರಿರುವುದಾಗಿ ತಿಳಿಸಿದರು.

ವೈ.ಎಸ್.ವಿ.ದತ್ತಾ ಮಾತನಾಡಿ, ದೇವೇಗೌಡರು ಮತ್ತು ನನ್ನ ನಡುವಿನ ಸಂಬಂಧ ರಾಜಕೀಯವನ್ನು ಮೀರಿದ್ದು ಎಂದು ಭಾವುಕರಾದರು. 

ಜೆಡಿಎಸ್ ಪಕ್ಷ ಕಟ್ಟುವಲ್ಲಿ ದತ್ತ ಅವರ ಪಾತ್ರ ಮಹತ್ವದ್ದಾಗಿದೆ. ನಡು ರಾತ್ರಿಯಲ್ಲಿಯೂ ದತ್ತಾ ಅವರನ್ನು ಕರೆದು ದೇವೇಗೌಡರು ಚರ್ಚೆ ಮಾಡುತ್ತಿದ್ದರು ಎಂದು ಹೆಚ್.ಡಿ. ರೇವಣ್ಣ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT