ಮುರುಗೇಶ್ ನಿರಾಣಿ, ಡಾ.ಕೆ. ಸುಧಾಕರ್ ನಾಮಪತ್ರ ಸಲ್ಲಿಕೆ 
ರಾಜಕೀಯ

ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ತಾರಕ್ಕೇರುತ್ತಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ  ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ   ಪಿ.ಸಿ.ಗದ್ದಿಗೌಡರ್, ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಸೇರಿದಂತೆ ಅನೇಕ ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಲ್ಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಇದೇ 19ರಂದು  ನಿರಾಣಿ ಅವರು ಮತ್ತೊಮ್ಮೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

ಮತ್ತೊಂದೆಡೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕುಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಗೆ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಾ. ಕೆ. ಸುಧಾಕರ್ ನಾಲ್ಕನೇ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪ ಹೊಂದಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್