ಮುದ್ದಹನುಮೇಗೌಡ 
ರಾಜಕೀಯ

ಮೂರು ಪಕ್ಷಗಳಿಗೂ ಸಲ್ಲದ ಮುದ್ದಹನುಮೇಗೌಡ: 'ಜನತಾ' ನ್ಯಾಯಾಲಯದ ಮೊರೆ ಹೋದ 'ದುರಂತ' ನಾಯಕ!

ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.

ತುಮಕೂರು: ಕುಣಿಗಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್‌ಪಿ ಮುದ್ದಹನುಮೇಗೌಡ  ಅವರಿಗೆ ಈ ಬಾರಿಯೂ ಟಿಕೆಟ್ ನೀಡದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಉದ್ದೇಶದಿಂದ ಮುದ್ದಹನುಮೇಗೌಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು.

ಆದರೆ ಇಲ್ಲಿಯೂ ಟಿಕೆಟ್‌ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಮೂರು ದಶಕಗಳ ವೃತ್ತಿಜೀವನದಲ್ಲಿ ಮೂರು ಪ್ರಮುಖ ರಾಜಕೀಯ ಪಕ್ಷಗಳಿಂದ ನನಗೆ ದ್ರೋಹ ಬಗೆದಿದೆ ಎಂದು ಎಸ್‌ಪಿ ಮುದ್ದಹನುಮೇಗೌಡ (68) ಹೇಳಿದ್ದಾರೆ.

ಚುನಾವಣಾ ರಾಜಕೀಯದ ಆರಂಭದಿಂದ ಈ ವರೆಗೂ ಎಸ್‌ಪಿ ಮುದ್ದಹನುಮೇಗೌಡ ಅವರು ನಿರಂತರವಾಗಿ ವಿಶ್ವಾಸ ದ್ರೋಹ  ಹಾಗೂ ಸಮಯದ ಕೈಗೊಂಬೆಯಾಗಿದ್ದಾರೆ. ಇದೀಗ ಯಾವ ಪಕ್ಷದ ಹಂಗು ಇಲ್ಲದೇ ‘ಸ್ವತಂತ್ರ’ರಾಗಲು ತೀರ್ಮಾನ ಮಾಡಿದ್ದಾರೆ.

ಈ ಬಗ್ಗೆ ನೋವು ಹೊರಹಾಕಿಕೊಂಡಿರುವ ಅವರುಕಾಂಗ್ರೆಸ್‌ನವರು 3 ಬಾರಿ, ಜೆಡಿಎಸ್‌ನವರು 1 ಬಾರಿ ಅನ್ಯಾಯ ಮಾಡಿದ್ದರು. ಈಗ ಬಿಜೆಪಿ ಟಿಕೆಟ್‌ ಕೂಡ ನೀಡಿಲ್ಲ. ಪರವಾಗಿಲ್ಲ ಜನ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಯಾರು ಏನೇ ಮಾಡಿದರೂ ಜನರ ತೀರ್ಪು ಅಂತಿಮ. ನಾನು ಜನತಾ ನ್ಯಾಯಾಲಯದಲ್ಲೇ ನ್ಯಾಯ ಕೋರುತ್ತೇನೆ” ಎಂದು ಹೇಳಿದ್ದಾರೆ.

1989ರ ಕುಣಿಗಲ್‌ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್‌ಪಿ ಮುದ್ದಹನುಮೇಗೌಡರಿಗೆ  ಕಾಂಗ್ರೆಸ್ ಪಕ್ಷ ಬಿ ಫಾರಂ ಕೊಟ್ಟಿತ್ತು. ಆದರೆ ಆ ನಂತರ ಲಕ್ಕಪ್ಪ ಅವರಿಗೆ ಸಿ ಫಾರಂ ನೀಡಿ ಕಣಕ್ಕಿಳಿಸಿತ್ತು. ಅದಾದ ಬಳಿಕ 1994 ಮತ್ತು 1999ರಲ್ಲಿ ಕಾಂಗ್ರೆಸ್‌ನಿಂದ ಸತತ ಎರಡು ಬಾರಿ ಚುನಾಯಿತರಾದ ಎಸ್‌ಪಿ ಮುದ್ದಹನುಮೇಗೌಡ 2004ರಲ್ಲಿ ಪರಾಭವಗೊಂಡರು.

2004ರಲ್ಲಾದ ಒಂದೇ ಒಂದು ಸೋಲಿನಿಂದಾಗಿ ಅವರಿಗೆ ಮತ್ತೆ ಎರಡನೇ ಅವಕಾಶವೇ ಸಿಗಲೇ ಇಲ್ಲ. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಾದಾಗ ಕುಣಿಗಲ್‌ ಅಥವಾ ತುಮಕೂರು ಗ್ರಾಮಾಂತರ ಎರಡರಲ್ಲಿ ಒಂದು ಕ್ಷೇತ್ರಕ್ಕಾದರೂ ಕಾಂಗ್ರೆಸ್‌ ಎಸ್‌ಪಿಎಂಗೆ ಟಿಕೆಟ್‌ ನೀಡಬಹುದಿತ್ತು. ಆದರೆ, ಎರಡೂ ಕ್ಷೇತ್ರಕ್ಕೂ ಇವರನ್ನು ಕಡೆಗಣಿಸಲಾಯಿತು.

2009ರಲ್ಲಿ ಜೆಡಿಎಸ್‌ನಿಂದ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಪರಾಜಯಗೊಂಡಿದ್ದ ಎಸ್‌ಪಿ ಮುದ್ದಹನುಮೇಗೌಡಗೆ ಜೆಡಿಎಸ್‌ ಪಕ್ಷವು ಕುಣಿಗಲ್‌ ಕ್ಷೇತ್ರದ ಟಿಕೆಟ್‌ ನೀಡುವ ಭರವಸೆ ನೀಡಿ ಕೈಕೊಟ್ಟಿತು. ಬಿ ಫಾರಂ ನೀಡಿ ಆನಂತರ ಡಿ ನಾಗರಾಜಯ್ಯ ಅವರಿಗೆ ಸಿ ಫಾರಂ ಕೊಟ್ಟು ಜೆಡಿಎಸ್‌ ಕಣಕ್ಕಿಳಿಸಿತು.

2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆದ್ದ ಎಸ್‌ಪಿ ಮುದ್ದಹನುಮೇಗೌಡ ಅತ್ಯುತ್ತಮ ಸಂಸದೀಯ ಪಟುವಾಗಿ ಜನಪ್ರಿಯತೆ ಹೆಚ್ಚಿಸಿಕೊಂಡರು. ಹಾಲಿ ಸಂಸದರಾಗಿದ್ದರೂ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯ ನೆಪದಲ್ಲಿ ಎಚ್‌ಡಿ ದೇವೇಗೌಡರನ್ನು ಕಣಕ್ಕಿಳಿಸಿ ಎಸ್‌ಪಿ ಮುದ್ದಹನುಮೇಗೌಡರಿಗೆ ಕೈಕೊಟ್ಟಿತು. ಚುನಾವಣಾ ರಾಜಕೀಯ ಜೀವನದುದ್ದಕ್ಕೂ ‘ದುರಂತ’ ನಾಯಕರಾಗಿರುವ ಎಸ್‌.ಪಿ.ಮುದ್ದಹನುಮೇಗೌಡ ಈ ಬಾರಿ ಕುಣಿಗಲ್‌ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT