ಎನ್ ಆರ್ ಸಂತೋಷ್- ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.

ಬೆಂಗಳೂರು: ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.
 
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯಿಂದ ಜಿವಿಟಿ ಬಸವರಾಜ್ ಗೆ ಟಿಕೆಟ್ ನೀಡಲಾಗಿದ್ದರೆ, ಜೆಡಿಎ ನಾಯಕ ಹೆಚ್ ಡಿ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿನ ಮೂಲಗಳ ಪ್ರಕಾರ, ಎನ್  ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸಿಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜೆಡಿಎಸ್ ಅರಸಿಕೆರೆ ವಿಧಾನಸಭಾ ಕ್ಷೇತ್ರದಿಂದ ಕುರುಬ ಸಮುದಾಯದ ಬಾಣಾವರ ಅಶೋಕ್ ಗೆ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ನ ಹಾಲಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಎನ್ ಆರ್ ಸಂತೋಷ್ ಲಭ್ಯವಿರಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT