ಎನ್ ಆರ್ ಸಂತೋಷ್- ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.

ಬೆಂಗಳೂರು: ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.
 
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯಿಂದ ಜಿವಿಟಿ ಬಸವರಾಜ್ ಗೆ ಟಿಕೆಟ್ ನೀಡಲಾಗಿದ್ದರೆ, ಜೆಡಿಎ ನಾಯಕ ಹೆಚ್ ಡಿ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿನ ಮೂಲಗಳ ಪ್ರಕಾರ, ಎನ್  ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸಿಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜೆಡಿಎಸ್ ಅರಸಿಕೆರೆ ವಿಧಾನಸಭಾ ಕ್ಷೇತ್ರದಿಂದ ಕುರುಬ ಸಮುದಾಯದ ಬಾಣಾವರ ಅಶೋಕ್ ಗೆ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ನ ಹಾಲಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಎನ್ ಆರ್ ಸಂತೋಷ್ ಲಭ್ಯವಿರಲಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT