ಲಕ್ಷ್ಮಣ್ ಸವದಿ-ಬಸವರಾಜ ಹೊರಟ್ಟಿ 
ರಾಜಕೀಯ

ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜಿನಾಮೆ: ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ!

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ವಿಧಾನಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ವಿಧಾನಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿದ ಲಕ್ಷ್ಮಣ್ ಸವದಿ ಅವರು ರಾಜಿನಾಮೆ ಪತ್ರವನ್ನ ನೀಡಿದ್ದಾರೆ. ಈ ವೇಳೆ ಯಾವುದಾದರೂ ರಾಜಕೀಯ ಒತ್ತಡಕ್ಕೆ ಸಿಲುಕಿ ರಾಜಿನಾಮೆ ನೀಡುತ್ತಿದ್ದೀರಾ ಎಂದು ಸಭಾಪತಿಗಳು ಪ್ರಶ್ನಿಸಿದ್ದು ಇದಕ್ಕೆ ನಾನು ಸ್ವಹಿಚ್ಛೆಯಿಂದ ರಾಜಿನಾಮೆ ನೀಡುತ್ತಿರುವುದಾಗಿ ಸವದಿ ಹೇಳಿದರು.

ಇದಕ್ಕೂ ಮುನ್ನ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದರು. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಲಕ್ಷ್ಮಣ್ ಸವದಿ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕೈ ನಾಯಕರು ಆಗಲಿ ಎಂದಿದ್ದಾರೆ ಎಂದು ಸವದಿ ಹೇಳಿದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಸವದಿ ಹೇಳಿದ್ದಾರೆ.

ಲಕ್ಷ್ಮಣ್ ಸವದಿ ಅವರು ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT