ಲಕ್ಷ್ಮಣ್ ಸವದಿ ಅವರೊಂದಿಗೆ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಮಾತುಕತೆಯ ಚಿತ್ರ 
ರಾಜಕೀಯ

ಲಕ್ಷ್ಮಣ ಸವದಿ ದೊಡ್ಡ ತಪ್ಪು‌ ಮಾಡುತ್ತಿದ್ದಾರೆ, ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ: ಅರುಣ್ ಸಿಂಗ್

ಲಕ್ಷ್ಮಣ ಸವದಿ ಅವರು ಬಹಳ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಬೆಂಗಳೂರು: ಲಕ್ಷ್ಮಣ ಸವದಿ ಅವರು ಬಹಳ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಇಂದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್,  ‘ಈಗ ಅವರು ಜಗಳಗಂಟ ಪಕ್ಷಕ್ಕೆ ಹೋಗಿದ್ದಾರೆ. ಕಾಂಗ್ರೆಸ್ ನಲ್ಲಿ ಅವರಿಗೆ ಭವಿಷ್ಯ ಇಲ್ಲ. ಇಷ್ಟು ವರ್ಷ ಅವರು ಬಿಜೆಪಿಯಲ್ಲಿ ಇದ್ದವರು. ಕಾಂಗ್ರೆಸ್ ಗೆ ಸೇರುವ ನಿರ್ಧಾರ ಮಾಡಬಾರದಿತ್ತು ಎಂದಿದ್ದಾರೆ.

ಲಕ್ಷ್ಮಣ ಸವದಿ ಬಹಳ ದೊಡ್ಡ ತಪ್ಪು‌ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಗೆ ಹೋದ ಮೇಲೆ ಪಶ್ಚಾತ್ತಾಪ ಪಡುತ್ತಾರೆ. ಸವದಿ ಅವರು ಚುನಾವಣೆಯಲ್ಲಿ ಸೋತ ನಂತರ ಕೂಡ ಅವರನ್ನು ಎಂಎಲ್‌ಸಿ, ಡಿಸಿಎಂ ಮಾಡಲಾಯಿತು. ಆದರೆ ಸವದಿ ಕಾಂಗ್ರೆಸ್​ಗೆ ಹೋಗಿರುವುದು ನಮ್ಮ ಕಾರ್ಯಕರ್ತರಿಗೆ ನೋವಾಗಿದೆ ಎಂದರು.

ಆದರೆ ಯಾರೋ ನಾಲ್ಕು ಜನ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ. ಹೋಗುವವರು ದುಡುಕಿನ ನಿರ್ಧಾರ ತಗೊಂಡು ಹೋಗಿದ್ದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು 20 ವರ್ಷವಾಗಬಹುದು. 10 ವರ್ಷವಾದ್ರೂ ರಾಹುಲ್ ಮುಖ ನೋಡುತ್ತಾರೋ ಇಲ್ಲವೋ ಗೊತ್ತಿಲ್ಲ ಎನ್ನುವ ಮೂಲಕ ಲಕ್ಷ್ಮಣ ಸವದಿಗೆ ಟಾಂಗ್​ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT