ಶಿವರಾಮೇಗೌಡ ಮತ್ತು ಪುಟ್ಟರಾಜು 
ರಾಜಕೀಯ

ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದರು ಅಧಿಕಾರ ಅನುಭವಿಸಿಲ್ಲ; ನಾನು ತಪ್ಪು ಮಾಡಿದ್ದರೆ ಕ್ಷಮಿಸಿ, ನನ್ನ ಪತ್ನಿಗೆ ಮತ ನೀಡಿ!

ಮೂರೂ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ಮುಂದುವರಿದಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪ್ರಚಾರ ಆರಂಬಿಸಿದ್ದಾರೆ.

ಮೇಲುಕೋಟೆ: ಮೂರೂ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ಮುಂದುವರಿದಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪ್ರಚಾರ ಆರಂಬಿಸಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಾಗಮಂಗಲದಿಂದ ಸ್ಪರ್ಧಿಸಲು ಟಿಕೆಟ್ ಪಡೆದಿರುವ ಪತ್ನಿ ಸುಧಾ ಶಿವರಾಮೇಗೌಡ ಪರ ಮತ ಯಾಚಿಸಿದರು.

ಕಳೆದ ನಾಲ್ಕು ದಶಕಗಳಿಂದ ನಾನು ರಾಜಕೀಯದಲ್ಲಿದ್ದೇನೆ, ಆದರೆ ಯಾವುದೇ ಎಂದಿಗೂ ಅಧಿಕಾರವನ್ನು ಅನುಭವಿಸಲಿಲ್ಲ. ಆದರೂ ಈ ಭಾಗದ ಜನರು ನನ್ನೊಂದಿಗಿದ್ದಾರೆ. ನಾನೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ನನ್ನ ಪತ್ನಿಗೆ ಮತ ನೀಡಿ ಎಂದು ನಾಗಮಂಗಲದಲ್ಲಿ ಹೇಳಿದರು.

ಇನ್ನೂ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಗುರುವಾರ ಪ್ರಚಾರ ಆರಂಭಿಸಿದ್ದಾರೆ. ತಾಲೂಕಿನ ಬಳಘಟ್ಟ, ಜಕ್ಕನಹಳ್ಳಿ, ಮಾಣಿಕ್ಯನಹಳ್ಳಿ, ಹಳೇಬೀದಿ, ಸುಂಕಾತೊಣ್ಣೂರು, ಲಕ್ಷ್ಮೀಸಾಗರ, ಚಿಕ್ಕಾಡೆ, ಕನಗನಮರಡಿ, ದೊಡ್ಡಬ್ಯಾಡಹಳ್ಳಿ, ಹಿರೇಮರಳಿ ಮತ್ತಿತರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

ಮೊದಲು ಪುಟ್ಟರಾಜು ದಂಪತಿ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜೆಡಿಎಸ್ ನೀಡಿದ ಭರವಸೆಗಳು ಮತ್ತು ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?