ಅರುಣ್ ಸಿಂಗ್ 
ರಾಜಕೀಯ

ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಪೈಪೋಟಿ: 3ನೇ ಪಟ್ಟಿ ಹೊರಬರಲ್ಲ, ಕಾದು ನೋಡಿ ಎಂದ ಅರುಣ್ ಸಿಂಗ್

ಕಾಂಗ್ರೆಸ್  ನಾಯಕರ ನಡುವೆ ಆಂತರಿಕ ಪೈಪೋಟಿ ಇರುವುದರಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಧೀರ್ಘ ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್  ನಾಯಕರ ನಡುವೆ ಆಂತರಿಕ ಪೈಪೋಟಿ ಇರುವುದರಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಗೆ ಧೀರ್ಘ ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಮೂರನೇ ಪಟ್ಟಿ ಹೊರ ಬರಲ್ಲ. ಕಾದು ನೋಡಿ, ಅಲ್ಲಿ ನಾಯಕರ ನಡುವೆ ಕಿತ್ತಾಟವಿದೆ ಎಂದರು. 

ಹಿರಿಯರಿಗೆ ಟಿಕೆಟ್ ನಿರಾಕರಿಸಿ, ಹೊಸಬರಿಗೆ ಮಣೆ ಕುರಿತಂತೆ  ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಎಲ್ಲರೂ ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಟಿಕೆಟ್ ನಿರಾಕರಿಸಿದಾಗ ನೋವು ಸಹಜ. ಆದರೆ ಬಿಜೆಪಿ ಸದಸ್ಯರು ರಾಷ್ಟ್ರ ಮೊದಲು ಎಂಬ ಸಿದ್ದಾಂತಕ್ಕಾಗಿ ಕೆಲಸ ಮಾಡುತ್ತಾರೆ. ಪಕ್ಷದ ಎಲ್ಲರೂ ಒಗ್ಗಟ್ಟಾಗಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಬಣಗಳಾಗಿ ವಿಭಜನೆಯಾಗಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಲ್ಲಿ ಪೈಪೋಟಿ ಕಂಡುಬರುತ್ತಿದೆ.  ಬಿಜೆಪಿ 212 ಸ್ಥಾನಗಳ ಪೈಕಿ 66ರಲ್ಲಿ ಹೊಸಬರಿಗೆ ಟಿಕೆಟ್ ನೀಡಿದ್ದು, ಚುನಾವಣೆಯಲ್ಲಿ ಪಕ್ಷ ಉತ್ತಮ ಫಲಿತಾಂಶ ಪಡೆಯಲಿದೆ ಎಂದರು. 

ಆಡಳಿತ ವಿರೋಧಿ ಅಲೆ ಇಲ್ಲ. ಆಡಳಿತ ಪರ ಅಲೆಯಿದೆ. ಕರ್ನಾಟಕದ ಪರಿಸ್ಥಿತಿ ಈಗ ಗಟ್ಟಿಯಾಗಿದೆ. ಸುಲಭ ಜೀವನ ನಿರ್ವಹಣೆ ಅಥವಾ ಅನ್ವೇಷಣೆ ಎಲ್ಲದರಲ್ಲೂ ಪ್ರಗತಿಯಾಗಿದ್ದು, ಜನರ ಭಾವನೆ ಬಿಜೆಪಿ ಜೊತೆಗಿದೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT