ಸಂಗಣ್ಣ ಕರಡಿ 
ರಾಜಕೀಯ

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತೆನೆ ಕೈ ಹಿಡಿಯಲು ಮುಂದಾದ ಸಂಗಣ್ಣ ಕರಡಿ

ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ. 

ಕೊಪ್ಪಳ: ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ. 

ಸಂಗಣ್ಣ ಕರಡಿ ಅವರು ಕೊಪ್ಪಳ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.

ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.

ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ ಕರಡಿಯವರು ನಾಳೆ ಲೋಕಸಭಾ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಿ ಏಪ್ರಿಲ್ 19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT