ರಾಜಕೀಯ

ಶಿಕಾರಿಪುರದಲ್ಲಿ ಬಿ ವೈ ವಿಜಯೇಂದ್ರಗೆ ಪ್ರತಿಭಟನೆ, ವಿರೋಧ ಬಿಸಿ: ಪ್ರಚಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ತಾಂಡಾ ಸಮುದಾಯದವರಿಂದ ತೀವ್ರ ವಿರೋಧ

Sumana Upadhyaya

ಶಿಕಾರಿಪುರ: ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿ ವೈ ವಿಜಯೇಂದ್ರ ಅವರಿಗೆ ಬಂಜಾರ ಸಮುದಾಯದವರ ಪ್ರತಿಭಟನೆ ಬಿಸಿ ತಟ್ಟಿದೆ.

ಈ ಹಿಂದೆ ಬಂಜಾರ ಸಮುದಾಯದವರು ಶಿವಮೊಗ್ಗದ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿ ಕಲ್ಲು ತೂರಾಟ ನಡೆಸಿದ್ದರು. ಆಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಶಾಂತಗೊಳಿಸಬೇಕಾಯಿತು. ಇದೀಗ ಇಂದು ಮತ್ತೆ ಬಿಜೆಪಿ ಸರ್ಕಾರ ಇತ್ತೀಚೆಗೆ ತಂದಿರುವ ಒಳ ಮೀಸಲಾತಿ ನೀತಿ ವಿರೋಧಿಸಿ ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ  ಕೂಗಿದರು.

ಇಂದು ತರಲಘಟ್ಟ ಗ್ರಾಮದಲ್ಲಿ ತಾಂಡಾ ಸಮುದಾಯದವರಿಂದ ವಿಜಯೇಂದ್ರ ಅವರಿಗೆ ವಿರೋಧ ವ್ಯಕ್ತವಾಗಿದೆ. 

SCROLL FOR NEXT