ಖರ್ಗೆ, ಶೆಟ್ಟರ್, ಕೆ.ಸಿ. ವೇಣುಗೋಪಾಲ್ 
ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿ 'ಇಸ್ಪೀಟ್ ಎಲೆ'ಯಂತೆ ಬೀಳುತ್ತಿದೆ: ಕಾಂಗ್ರೆಸ್

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಸೇರಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಶೆಟ್ಟರ್ ಪಕ್ಷ ಸೇರ್ಪಡೆ ಕುರಿತು  ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕರ್ನಾಟಕ ರಾಜಕೀಯದಲ್ಲಿ ಭಾರಿ ಬದಲಾವಣೆ! ಮಾಜಿ ಸಿಎಂ ಮತ್ತು ರಾಜ್ಯಾದ್ಯಂತ  ಗೌರವಾನ್ವಿತ ನಾಯಕರಾದ ಜಗದೀಶ್ ಶೆಟ್ಟರ್ ಅವರಿಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಹಾದಿಯಲ್ಲಿದೆ. ಬಿಜೆಪಿ ಇಸ್ಪೀಟ್ ಎಲೆಯಂತೆ ಬೀಳುತ್ತಿದೆ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ. 

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ (ಕೇಂದ್ರ) ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದರು. ಆರು ಬಾರಿ ಶಾಸಕರಾಗಿರುವ 67 ವರ್ಷ ವಯಸ್ಸಿನ  ಶೆಟ್ಟರ್ ಅವರು ಕೊನೆಯ ಬಾರಿಗೆ ಸ್ಪರ್ಧಿಸಲು ಬಯಸಿದ್ದರು. ಬಿಜೆಪಿಯಿಂದ ಟಿಕೆಟ್ ನಿರಾಕರಿಸುವ ಮೂಲಕ ಅವಮಾನ ಮಾಡಲಾಗಿದೆ. ಪಕ್ಷದ ಇಂದು ಕೆಲವೇ ಜನರ ಹಿಡಿತದಲ್ಲಿದೆ ಎಂದು ಶೆಟ್ಟರ್ ಕಾಂಗ್ರೆಸ್ ಸೇರಿದ ನಂತರ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ