ರಾಹುಲ್ ಗಾಂಧಿ 
ರಾಜಕೀಯ

ಶೇ.50ರಷ್ಟು ಮೀಸಲಾತಿ ಮಿತಿ ರದ್ದುಪಡಿಸಿ, ಜಾತಿ ಗಣತಿ ಆಧಾರದ ಮೇಲೆ ಮೀಸಲಾತಿ ನೀಡಿ: ರಾಹುಲ್ ಗಾಂಧಿ

ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು. ಜಾತಿ ಗಣತಿಯನ್ನು ಸಾರ್ವಜನಿಕಗೊಳಿಸಬೇಕು. ಜಾತಿ ಗಣತಿ ಆಧಾರದ ಮೇಲ ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯ ನೀಡಬೇಕು.

ಬೀದರ್: ದೇಶದಲ್ಲಿ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದುಹಾಕಬೇಕು. ಜಾತಿ ಗಣತಿಯನ್ನು ಸಾರ್ವಜನಿಕಗೊಳಿಸಬೇಕು. ಜಾತಿ ಗಣತಿ ಆಧಾರದ ಮೇಲ ಒಬಿಸಿಗಳಿಗೆ ಉತ್ತಮ ಪ್ರಾತಿನಿಧ್ಯ ನೀಡಬೇಕು. ದಲಿತರು ಹಾಗೂ ಆದಿವಾಸಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ತಮ್ಮ ನಿಲುವನ್ನು ಪುನರುಚ್ಚರಿಸಿದ್ದಾರೆ.

ಇಂದು ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬೀದರ್ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಕರ್ಮಭೂಮಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಸವಣ್ಣನವರ ಆದರ್ಶಗಳಾದ ಸಮಾನ ಪಾಲುದಾರಿಕೆ, ಸಮಾನ ಅವಕಾಶಗಳ ಮೇಲೆ ದಾಳಿ ನಡೆಸುತ್ತಿದ್ದು. ಅವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು.

2011ರ ಜನಗಣತಿಯ ಜಾತಿ ಆಧಾರಿತ ಒಬಿಸಿ ವರ್ಗೀಕರಣದ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಮತ್ತು ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿಯನ್ನು ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಒತ್ತಾಯಿಸಿದರು.

"ಮೋದಿ ಕೇವಲ ಒಬಿಸಿಗಳ ಬಗ್ಗೆ ಮಾತನಾಡುತ್ತಾರೆ ಅಷ್ಟೆ. ಆದರೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ. ಮೋದಿಗೆ ಒಬಿಸಿ ಮತಗಳು ಮಾತ್ರ ಬೇಕು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಜವಾಗಿಯೂ ಒಬಿಸಿಗಳಿಗೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಶಕ್ತಿ ನೀಡುತ್ತದೆ ಎಂದು ಭರವಸೆ ನೀಡಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ. ಅವರು ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಎರಡು ಅಥವಾ ಮೂರು ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್