ರಾಜಕೀಯ

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್

Vishwanath S

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. 

ಈ ಬಾರಿ ಅರವಿಂದ್ ಲಿಂಬಾವಳಿ ಬದಳಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಗೆ ಟಿಕೆಟ್ ಕೈತಪ್ಪಿದ್ದ ಶ್ರೀವತ್ಸ ಎಂಬುವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ಜಗದೀಶ್ ಶೆಟ್ಟರ್ ಪಕ್ಷ ಬಿಡಲು ಕಾರಣವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅನ್ನು ಮಹೇಶ್ ತೆಂಗಿನಕಾಯಿಗೆ ನೀಡಲಾಗಿದೆ. ಹೆಬ್ಬಾಳದಿಂದ ಕಟ್ಟಾ ಜಗದೀಶ್, ನಾಗ್ತಾನ್ ನಿಂದ ಸಂಜೀವ್ ಐಹೊಳೆ, ಸೆಡಂನಿಂದ ರಾಜಕುಮಾರ್ ಪಾಟೀಲ್, ಕೊಪ್ಪಳದಿಂದ ಮಂಜುಳಾ ಅಂಬರೀಶ್, ರೋಣಾದಿಂದ ಕಳಕಪ್ಪ ಬಂಡಿ, ಹಗರಿ ಬೊಮ್ಮನಹಳ್ಳಿಯಿಂದ ಬಿ. ರಾಮಣ್ಣ, ಗೋವಿಂದರಾಜನಗರದಿಂದ ಉಮೇಶ್ ಶೆಟ್ಟಿ ಹೆಸರು ಘೋಷಣೆಯಾಗಿದೆ. 

ಒಟ್ಟಾರೆ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು ಇನ್ನು ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಇದೆ.

SCROLL FOR NEXT