ಅರವಿಂದ್ ಲಿಂಬಾವಳಿ-ರಾಮದಾಸ್ 
ರಾಜಕೀಯ

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. 

ಈ ಬಾರಿ ಅರವಿಂದ್ ಲಿಂಬಾವಳಿ ಬದಳಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಗೆ ಟಿಕೆಟ್ ಕೈತಪ್ಪಿದ್ದ ಶ್ರೀವತ್ಸ ಎಂಬುವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ಜಗದೀಶ್ ಶೆಟ್ಟರ್ ಪಕ್ಷ ಬಿಡಲು ಕಾರಣವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅನ್ನು ಮಹೇಶ್ ತೆಂಗಿನಕಾಯಿಗೆ ನೀಡಲಾಗಿದೆ. ಹೆಬ್ಬಾಳದಿಂದ ಕಟ್ಟಾ ಜಗದೀಶ್, ನಾಗ್ತಾನ್ ನಿಂದ ಸಂಜೀವ್ ಐಹೊಳೆ, ಸೆಡಂನಿಂದ ರಾಜಕುಮಾರ್ ಪಾಟೀಲ್, ಕೊಪ್ಪಳದಿಂದ ಮಂಜುಳಾ ಅಂಬರೀಶ್, ರೋಣಾದಿಂದ ಕಳಕಪ್ಪ ಬಂಡಿ, ಹಗರಿ ಬೊಮ್ಮನಹಳ್ಳಿಯಿಂದ ಬಿ. ರಾಮಣ್ಣ, ಗೋವಿಂದರಾಜನಗರದಿಂದ ಉಮೇಶ್ ಶೆಟ್ಟಿ ಹೆಸರು ಘೋಷಣೆಯಾಗಿದೆ. 

ಒಟ್ಟಾರೆ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು ಇನ್ನು ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT