ಜಗದೀಶ್ ಶೆಟ್ಟರ್ 
ರಾಜಕೀಯ

ಜಗದೀಶ್ ಶೆಟ್ಟರ್ ಗೆ ನಾವು ಯಾವ ಆಫರ್ ಕೊಟ್ಟಿಲ್ಲ, ಸ್ವಾಭಿಮಾನಕ್ಕಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ ಕೆ ಶಿವಕುಮಾರ್

ಜಗದೀಶ್ ಶೆಟ್ಟರ್ ಅವರಿಗೆ ನಾವು ಯಾವುದೇ ಆಫರ್ ಕೊಟ್ಟಿಲ್ಲ, ಅವರು ಕೂಡ ಏನೂ ಬೇಡಿಕೆಯಿಟ್ಟಿಲ್ಲ, ಬಿಜೆಪಿಯಲ್ಲಿ ಅವಮಾನವಾಗಿ ನೊಂದು ಅವರು ಪಕ್ಷ ತ್ಯಜಿಸಿದ್ದಾರೆ, ಇಂದು ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಜಗದೀಶ್ ಶೆಟ್ಟರ್ ಅವರಿಗೆ ನಾವು ಯಾವುದೇ ಆಫರ್ ಕೊಟ್ಟಿಲ್ಲ, ಅವರು ಕೂಡ ಏನೂ ಬೇಡಿಕೆಯಿಟ್ಟಿಲ್ಲ, ಬಿಜೆಪಿಯಲ್ಲಿ ಅವಮಾನವಾಗಿ ನೊಂದು ಅವರು ಪಕ್ಷ ತ್ಯಜಿಸಿದ್ದಾರೆ, ಇಂದು ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು ಅದರಲ್ಲಿ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಅವರ ಜೊತೆಗೆ ಜಗದೀಶ್ ಶೆಟ್ಟರ್ ಅವರು ಕೂಡ ಇದ್ದಾರೆ.

ಆತ್ಮಗೌರವಕ್ಕಾಗಿ, ಸ್ವಾಭಿಮಾನಕ್ಕಾಗಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿಯಲ್ಲಿ ಅವರಿಗೆ ಅವಮಾನವಾಗಿದೆ. ಅವರ ಜೊತೆ ಅನೇಕ ಲಿಂಗಾಯತ ನಾಯಕರು ಮುಖಂಡರು ಕೂಡ ಬಿಜೆಪಿ ತೊರೆಯಲಿದ್ದಾರೆ, ಬಹಳಷ್ಟು ಜನ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದರು. 

ಇನ್ನು ಸಿದ್ದರಾಮಯ್ಯ ಅವರು ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಯಾಗಲಿ, ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಇನ್ನು ಸ್ವಲ್ಪ ಹೊತ್ತು ಕಾಯಿರಿ ಎಲ್ಲವೂ ಗೊತ್ತಾಗಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!