ಟಿ. ನರಸಿಂಹ ಮೂರ್ತಿ 
ರಾಜಕೀಯ

ಮೂಢನಂಬಿಕೆಗೆ ಸೆಡ್ಡು: ಸೂರ್ಯಗ್ರಹಣದಂದು ಆರ್‌ಟಿಐ ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ನಾಮಪತ್ರ ಸಲ್ಲಿಕೆ!

ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ 20 ರಂದು ಸೂರ್ಯಗ್ರಹಣದ ವೇಳೆ ನಾಮಪತ್ರ ಸಲ್ಲಿಸುವುದಾಗಿ ವಿಚಾರವಾದಿ ಹಾಗೂ ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ತಿಳಿಸಿದ್ದಾರೆ.

ಬೆಂಗಳೂರು: ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ 20 ರಂದು ಸೂರ್ಯಗ್ರಹಣದ ವೇಳೆ ನಾಮಪತ್ರ ಸಲ್ಲಿಸುವುದಾಗಿ ವಿಚಾರವಾದಿ ಹಾಗೂ ಆರ್‌ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ತಿಳಿಸಿದ್ದಾರೆ.

ಏಪ್ರಿಲ್ 20ರಂದು ಸೂರ್ಯಗ್ರಹಣ ಮತ್ತು ಅಮಾವಾಸ್ಯೆ ಬರಲಿದ್ದು, ಹಲವು ಅಭ್ಯರ್ಥಿಗಳಿಗೆ ಅಶುಭ ದಿನವಾಗಿದ್ದರೂ ತಪ್ಪು ಕಲ್ಪನೆ ಹೋಗಲಾಡಿಸಲು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಏಪ್ರಿಲ್ 20 ರ ಮೊದಲು ನಾಮಪತ್ರ ಸಲ್ಲಿಸಿದ ಇತರ ಅಭ್ಯರ್ಥಿಗಳು ಗೆಲ್ಲುತ್ತಾರೆಯೇ ಎಂದು ನಾನು ನೋಡಬೇಕು. ಒಬ್ಬರೇ ಗೆಲ್ಲುತ್ತಾರೆ, ಆದ್ದರಿಂದ ಆ ದಿನವನ್ನು ತಪ್ಪಿಸುವುದರಿಂದ ಅವರಿಗೆ ಸಹಾಯ ಮಾಡುವುದಿಲ್ಲ. ನಾವು ತರ್ಕಬದ್ಧವಾಗಿ ಯೋಚಿಸಬೇಕು" ಎಂದು ಮೂರ್ತಿ ಹೇಳಿದರು.

ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದೇವು, ಆದರೆ ಮಾದರಿ ನೀತಿ ಸಂಹಿತೆಯಿಂದಾಗಿ ಅನುಮತಿ ಸಿಗಲಿಲ್ಲ ಎಂದು ತೊಂದರೆಯಾಗಿದೆ ಎಂದು ಮೂರ್ತಿ ತಿಳಿಸಿದರು. ಅಂಧಶ್ರದ್ಧೆ ವಿರುದ್ಧ ಪ್ರತಿಭಟನೆ ನಡೆಸುವ ಬದಲು ನಾಲ್ವರೊಂದಿಗೆ ಚುನಾವಣಾಧಿಕಾರಿ ಕ್ವೀನ್ಸ್‌ ರಸ್ತೆಯ ಅಧಿಕಾರಿ ಬಳಿ ತೆರಳಿ ನಾಮಪತ್ರ ಸಲ್ಲಿಸುತ್ತೇನೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT