ಎಸ್ ಎ ರಾಮದಾಸ್ 
ರಾಜಕೀಯ

ಮೈಸೂರಿನಲ್ಲೂ ಬಂಡಾಯದ ಬಿಸಿ: 30 ವರ್ಷ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ; ರಾಮದಾಸ್

ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.

ಮೈಸೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ.  ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ.

ಟಿಕೆಟ್ ಕೈ ತಪ್ಪಿರುವುದು ರಾಮದಾಸ್​​ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.

ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ನಾವು ರಾಮದಾಸ್ ಅವರ ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ಪಕ್ಷವನ್ನು ತಾಯಿ ಎಂದು ಭಾವಿಸಿರುವ ಅವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT