ವಿ. ಸೋಮಣ್ಣ, ಸಿದ್ದರಾಮಯ್ಯ 
ರಾಜಕೀಯ

ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ.ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆಯಾಗಿದೆ ಎಂದಿದ್ದಾರೆ. 

ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ. ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ‌ ಮಣ್ಣಿನ‌ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT