ಜೆಡಿಎಸ್'ಗೆ ಸೇರ್ಪಡೆಗೊಂಡ ಅನಿಲ್ ಲಾಡ್ 
ರಾಜಕೀಯ

ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್'ಗೆ ಟಿಕೆಟ್!

ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಬಳ್ಳಾರಿ: ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಳೆದ ರಾತ್ರಿ ಜೆಡಿಎಸ್ ನಾಯಕ ಹೆಚ್'ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ಅನಿಲ್ ಲಾಡ್ ಅವರು, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಅನಿಲ್ ಲಾಡ್ ಅವರು ಪಕ್ಷಕ್ಕೇ ಸೇರ್ಪಡೆಗೊಳ್ಳುತ್ತಿದ್ದಂತೆಯೇ ಕಳೆದ ವಾರ ಘೋಷಿಸಲಾಗಿದ್ದ ಬಳ್ಳಾರಿ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷವು ಏಕಾಏಕಿ ಬದಲಾಯಿಸಿದೆ.

ಜೆಡಿಎಸ್ ಗೆ ಸೇರ್ಪಡೆಯಾದ  ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಿದೆ. ಅನಿಲ್ ಲಾಡ್ ಅವರೇ ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದೆ.

ಕಳೆದ ವಾರ ಪ್ರಕಟವಾಗಿದ್ದ ಜೆಡಿಎಸ್ ಪಟ್ಟಿಯಲ್ಲಿ ಮುನ್ನಾಭಾಯಿ ಎನ್ನುವವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT