ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

2019ರ ಚುನಾವಣೆ ಗೆಲುವಿನ ದುರಹಂಕಾರ ಇನ್ನು ಕಡಿಮೆ ಆಗಿಲ್ಲ, ಜನ ಒಂದು ದಿನ ಇಳಿಸುತ್ತಾರೆ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ ವಿಧಾನಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿಕೆ ಬಂದರೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವ ಸಂಸದೆ ಸುಮಲತಾ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಮೂಡಿಗೆರೆ: ಮಂಡ್ಯ ವಿಧಾನಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಎಚ್.ಡಿಕೆ ಬಂದರೆ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಕೆ ನೀಡಿರುವ ಸಂಸದೆ ಸುಮಲತಾ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ  ಮೂಡಿಗೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಸುಮಲತಾ ಅವ್ರು 2019ರ ಚುನಾವಣೆಯ ದುರಹಂಕಾರದಲ್ಲಿದ್ದಾರೆ. ಅವರಿಗೆ ಇನ್ನೂ ದುರಹಂಕಾರ ಕಡಿಮೆ ಆಗಿಲ್ಲ. ಜನ ಒಂದಲ್ಲ ಒಂದು ದಿನ ಕೆಳಕ್ಕೆ ಇಳಿಸುತ್ತಾರೆ. ನನಗೆ ಸೇರಿದಂತೆ ಯಾರಿಗೂ ಯಾವುದೂ ಶಾಶ್ವತವಲ್ಲ ಎಂದಿದ್ದಾರೆ. ಸವಾಲಿನ ಮೂಲಕ ಸೆಡ್ಡು ಹೊಡೀತಾರೆ ಅಂದರೆ ದೇವೆಗೌಡರ ಕುಟುಂಬದ ಮೇಲಿನ ದ್ವೇಷ ಎದ್ದು ಕಾಣುತ್ತೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದೇವೇಗೌಡರ ಕುಟುಂಬದ ಮೇಲೆ ಯಾವ ಮಟ್ಟದಲ್ಲಿ ದ್ವೇಷ ಇದೆ ಅನ್ನೋದು ಗೊತ್ತಾಗುತ್ತಿದೆ. ಅವರು ತುಂಬಾ ದೊಡ್ಡವರು, ದೊಡ್ಡ ಮಟ್ಟದಲ್ಲಿ ಬೆಳೆದಿದ್ದಾರೆ. ಚನ್ನಪಟ್ಟಣದಲ್ಲಿ ಈಗಾಗಲೇ ಅರ್ಜಿ ಹಾಕಿದ್ದೇನೆ, ನಾನು ಒಂದೇ ಕಡೆ ಸ್ಪರ್ಧಿಸುವುದು.

ದೇವೇಗೌಡರ ಕುಟುಂಬದ ಯುವಕನನ್ನು ಸೋಲಿಸಿ, ಜನತಾ ದಳದ ಕೋಟೆಯನ್ನು ಛಿದ್ರ ಮಾಡಿದ್ದಾರೆ. 2019ರ ಚುನಾವಣೆಯ ಗುಂಗಿನಲ್ಲಿ ಅವರು ಇನ್ನು ಇದ್ದಾರೆ. ಜನ ಒಂದು ಜನ ದಿನ ಎಲ್ಲವನ್ನು ಇಳಿಸುತ್ತಾರೆ ಎಂದು ಸುಮಲತಾ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಕೆಂಡ ಕಾರಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಮುಗಿಸುತ್ತೇನೆಂದು ಸವಾಲು ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಜನತೆಯೇ ಸವಾಲು ಸ್ವೀಕರಿಸಲಿದ್ದಾರೆ. ಮಂಡ್ಯದಿಂದ ಸ್ಪರ್ಧೆ ಮಾಡಲು ನಾನೇನು ಟೂರಿಂಗ್ ಟಾಕೀಸಾ? ಕಾರ್ಯಕರ್ತರಿಗಾಗಿ ರಾಮನಗರ, ಚನ್ನಪಟ್ಟಣದಲ್ಲಿ ತಲೆಕೊಟ್ಟೆನು. ಮಂಡ್ಯದಲ್ಲಿ ಹಲವಾರು ಅಭ್ಯರ್ಥಿ ಆಕಾಂಕ್ಷಿಗಳಿದ್ದಾರೆ, ಸಮರ್ಥರಿದ್ದಾರೆ. ಮೇಲೇಳುವುದು, ಕೆಳಗೆ ಬೀಳುವುದು ಜನ ತೀರ್ಮಾನಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ ದಂಡ; 10 ವರ್ಷ ಶಿಕ್ಷೆ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಶಾಲೆಗಳಲ್ಲಿ 'ವಂದೇ ಮಾತರಂ' ಹಾಡುವುದನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಸರ್ಕಾರಕ್ಕೆ ಒತ್ತಾಯ

ಹಲವು ಅಪರಾಧಗಳಲ್ಲಿ ಭಾಗಿಯಾದ ಬಜರಂಗದಳವನ್ನು ನಿಷೇಧಿಸಿ: ಬಿಕೆ ಹರಿಪ್ರಸಾದ್ ಆಗ್ರಹ

SCROLL FOR NEXT