ರಾಜಕೀಯ

ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್

Lingaraj Badiger

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಅಜಿತ್ ಪವಾರ್ ಅವರು ಎನ್ ಸಿಪಿಯಿಂದ ಹೊರಬರುವ ಊಹಾಪೋಹಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದರೂ ಸಹ ಗುರುವಾರ ಮುಂಬೈನಲ್ಲಿ ನಡೆದ ಪಕ್ಷದ ಸಭೆಗೆ ಗೈರು ಆಗಿದ್ದರು.

ಎನ್ ಸಿಪಿ ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ 15 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್, ಶಿವಾಜಿರಾವ್ ಗಾರ್ಜೆ, ಕ್ಲೈಡ್ ಕ್ರಾಸ್ಟೊ ಮತ್ತು ಆರ್ ಹರಿ ಅವರು ಸ್ಥಾನ ಪಡೆದಿದ್ದಾರೆ. 

ಎನ್ ಸಿಪಿ ಕರ್ನಾಟಕ ಘಟಕದ ಮುಖ್ಯಸ್ಥರಾಗಿರುವ ಆರ್ ಹರಿ ಅವರು ಯಲಬುರ್ಗಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಎನ್‌ಸಿಪಿ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

SCROLL FOR NEXT