ಕೊತ್ತೂರು ಮಂಜುನಾಥ್ 
ರಾಜಕೀಯ

ಮುಳಬಾಗಿಲು ಅಭ್ಯರ್ಥಿ ಬದಲಿಸದಿದ್ದರೆ ಕೋಲಾರದಿಂದ ನಾಮಪತ್ರ ಸಲ್ಲಿಸಲ್ಲ: ಕೊತ್ತೂರು ಮಂಜುನಾಥ್ ಪಟ್ಟು; ಕಾಂಗ್ರೆಸ್ ಕ್ಯಾಂಡಿಡೇಟ್ ಚೇಂಜ್

ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಬದಲಿಸಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಪಕ್ಷ ಕೋಲಾರದ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ಒತ್ತಡಕ್ಕೆ ಮಣಿದು ಗುರುವಾರ ಮುಳಬಾಗಲು (ಎಸ್‌ಸಿ) ಅಭ್ಯರ್ಥಿಯನ್ನು ಬದಲಾಯಿಸಿದೆ.

ಬೆಂಗಳೂರು: ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಬದಲಿಸಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಪಕ್ಷ ಕೋಲಾರದ ಅಭ್ಯರ್ಥಿ ಕೊತ್ತೂರು ಜಿ ಮಂಜುನಾಥ್ ಒತ್ತಡಕ್ಕೆ ಮಣಿದು ಗುರುವಾರ ಮುಳಬಾಗಲು (ಎಸ್‌ಸಿ) ಅಭ್ಯರ್ಥಿಯನ್ನು ಬದಲಾಯಿಸಿದೆ.

ಮಾಜಿ ಶಾಸಕ ಹಾಗೂ ಕೋಲಾರ ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಒತ್ತಡಕ್ಕೆ ಮಣಿದ ಕಾಂಗ್ರೆಸ್‌ ಹೈಕಮಾಂಡ್ ಮುಳಬಾಗಿಲು ಮೀಸಲು ಕ್ಷೇತ್ರದ ಟಿಕೆಟ್‌ ಪ್ರಕಟಿಸಿದ 12 ಗಂಟೆಯೊಳಗೆ ಅಭ್ಯರ್ಥಿಯನ್ನು ದಿಢೀರ್‌ ಬದಲಾಯಿಸಿದೆ. ಬುಧವಾರ ರಾತ್ರಿ ಎಐಸಿಸಿ ಪ್ರಕಟಿಸಿದ ಐದನೇ ಪಟ್ಟಿಯಲ್ಲಿ ಡಾ.ಬಿ.ಸಿ. ಮುದ್ದು ಗಂಗಾಧರ್ ಎಂಬುವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಲಾಗಿತ್ತು. ‘ಬಿ’ ಫಾರಂ ಕೂಡ ನೀಡಲಾಗಿತ್ತು.

ಇದರಿಂದ ಕೋಪಗೊಂಡ ಕೊತ್ತೂರು ಮಂಜುನಾಥ್, ‘ಮುದ್ದು ಗಂಗಾಧರ್ ಯಾರು ಎಂಬುವುದೇ ಕ್ಷೇತ್ರದ ಜನರಿಗೆ ಗೊತ್ತಿಲ್ಲ. ಅಭ್ಯರ್ಥಿ ಬದಲಾಯಿಸದಿದ್ದರೆ ಕೋಲಾರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ’ ಎಂದು ಪಟ್ಟು ಹಿಡಿದಿದ್ದರು. ಇದರ ಜೊತೆಗೆ ಮುಳಬಾಗಿಲು ಕ್ಷೇತ್ರದಲ್ಲೂ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಡಾ.ಮುದ್ದು ಗಂಗಾಧರ್ ಅಭ್ಯರ್ಥಿಯಾಗುವುದಕ್ಕೆ ಭಾರಿ ವಿರೋಧ ವ್ಯಕ್ತವಾಯಿತು.

ಹೀಗಾಗಿ, ಡಾ.ಮುದ್ದು ಗಂಗಾಧರ್ ಬದಲಿಗೆ ಬೋವಿ ಸಮುದಾಯದ ಆದಿನಾರಾಯಣ ಎಂಬುವರಿಗೆ ಮುಳಬಾಗಿಲು ಟಿಕೆಟ್ ಘೋಷಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ಬಿ’ ಫಾರಂ ನೀಡಿದರು. ಬಾಗೇಪಲ್ಲಿಯ ಆದಿನಾರಾಯಣ ಬೆಂಗಳೂರಿನಲ್ಲಿ ನೆಲೆಸಿದ್ದು, ಕೊತ್ತೂರು ಮಂಜುನಾಥ ಅವರ ಆಪ್ತರಾಗಿದ್ದಾರೆ.

ಗುರುವಾರ ಕೋಲಾರದಲ್ಲಿ ನಾಮಪತ್ರ ಸಲ್ಲಿಸಿದ ಕೊತ್ತೂರು, ತಕ್ಷಣವೇ ಮುಳಬಾಗಿಲಿಗೆ ತೆರಳಿ ಆದಿನಾರಾಯಣ ನಾಮಪತ್ರ ಸಲ್ಲಿಕೆಗೆ ಸಹಕರಿಸಿದರು. ಇದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಹಿನ್ನಡೆಯಾಗಿದ್ದು, ಮಾಜಿ ಯುವ ಕಾಂಗ್ರೆಸ್ ಮುಖಂಡ ಡಾ.ಮುದ್ದುಗಂಗಾಧರ್, ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಆಪ್ತರೂ ಆಗಿದ್ದರು.

ಡಾ.ಮುದ್ದುಗಂಗಾಧರ್ ಅವರಿಗೆ ರಾಜಕೀಯ ಅನುಭವವಿಲ್ಲ, ಕೊತ್ತೂರು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಮತ್ತು ಇದು ಈ ಅವ್ಯವಸ್ಥೆಗೆ ಕಾರಣವಾಯಿತು" ಎಂದು  ಕಾಂಗ್ರೆಸ್ ನಾಯಕರೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT