ಸಿದ್ದರಾಮಯ್ಯ 
ರಾಜಕೀಯ

ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದುರನ್ನು ಕ್ಷೇತ್ರದತ್ತ ಕರೆತಂದ ಸೋಮಣ್ಣ: ಬಿಜೆಪಿ ಪ್ರಚಾರ ತಂತ್ರ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಮೈಸೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಸೋಮಣ್ಣ ಮತ್ತು ಬಿಜೆಪಿಯ ತೀವ್ರ ಪ್ರಚಾರದಿಂದಾಗಿ ಸಿದ್ದರಾಮಯ್ಯ ಅವರು ಶನಿವಾರ ತಮ್ಮ ಕ್ಷೇತ್ರಕ್ಕೆ ಧಾವಿಸುವಂತೆ ಮಾಡಿದೆ.

ಈ ಹಿಂದೆ ವರುಣಾದಲ್ಲಿ ಪ್ರಚಾರ ಮಾಡುವ ಅಗತ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ಇದೀಗ ಶನಿವಾರ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕ್ಷೇತ್ರಕ್ಕೆ ಆಗಮಿಸಿ ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಇಡೀ ದಿನ ಕ್ಷೇತ್ರದಲ್ಲಿ ಇರಲಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಒಗ್ಗಟ್ಟಿನ ಹೋರಾಟ ನಡೆಸುತ್ತಿದೆ. ಕ್ಷೇತ್ರದಲ್ಲಿ ಜನಪ್ರಿಯರಾಗಿರುವ ವಿಜಯೇಂದ್ರ ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕೂಡ ವರುಣಾದಲ್ಲಿ ಸೋಮಣ್ಣ ಪರ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯು ಪ್ರತಿಷ್ಠಿತ ಕ್ಷೇತ್ರವನ್ನು ಗೆಲ್ಲಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ರಣತಂತ್ರ ರೂಪಿಸುತ್ತಿದ್ದಾರೆ.

ಬಿಜೆಪಿಯ ಆಕ್ರಮಣಕಾರಿ ಪ್ರಚಾರದ ಬಗ್ಗೆ ಸಿದ್ದರಾಮಯ್ಯ ಅವರು ಚಿಂತಿತರಾಗಿದ್ದಾರೆ ಮತ್ತು ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ವಿವರಿಸಿವೆ.

ಮುಖ್ಯಮಂತ್ರಿ ಹುದ್ದೆಗೆ ಹಪಹಪಿಸುತ್ತಿರುವ ಸಿದ್ದರಾಮಯ್ಯ ಅವರ ಸೋಲನ್ನು ಅವರದೇ ಪಕ್ಷದ ನಾಯಕರೇ ಖಚಿತಪಡಿಸಿಕೊಳ್ಳಲು ಷಡ್ಯಂತ್ರಗಳು ನಡೆಯುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT