ಅಥಣಿಯಲ್ಲಿ ಗುರುವಾರ ಕೆಆರ್‌ಪಿಪಿ ಅಭ್ಯರ್ಥಿ ಬಸವರಾಜ ಬೆಸನಕೋಪ ಅವರ ಪರ ಪ್ರಚಾರ ನಡೆಸುತ್ತಿರುವ ಜನಾರ್ಧನ ರೆಡ್ಡಿ. 
ರಾಜಕೀಯ

ಅಧಿಕಾರಕ್ಕೆ ಬಂದಿದ್ದೇ ಆದರೆ, ಕೆಆರ್‌ಪಿಪಿಯಿಂದ ಸಕಾರಾತ್ಮಕ ಬದಲಾವಣೆ: ಗಾಲಿ ಜನಾರ್ಧನ ರೆಡ್ಡಿ

ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.

ಬೆಳಗಾವಿ: ಹಿಂದಿನ ಹಾಗೂ ಈಗಿನ ಸರ್ಕಾರಗಳ ಒಂದೇ ರೀತಿಯ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದು, ಸಕಾರಾತ್ಮಕ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆಂದು ಎಂದು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಶುಕ್ರವಾರ ಹೇಳಿದರು.

ಅಥಣಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಕೆಆರ್‌ಪಿಪಿ ಪಕ್ಷ ಅಭ್ಯರ್ಥಿ ಬಸವರಾಜ ಬೆಸನಕೋಪ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಜನಾರ್ಧನ ರೆಡ್ಡಿಯವರು ಅಥಣಿಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕಕ್ಕೆ ಕೆ.ಆರ್.ಪಿ.ಪಿ ಒತ್ತು ನೀಡುತ್ತಿದೆ. ಶಿಕ್ಷಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಪಕ್ಷದ ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ ಕನಿಷ್ಠ 25 ಸ್ಥಾನಗಳನ್ನು ಕೆಆರ್‌ಪಿಪಿ ಗೆಲ್ಲಲಿದೆ. ಚುನಾವಣೆಯಲ್ಲಿ ಕೆ.ಆರ್.ಪಿ.ಪಿ.ಯಡಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆಂದು ತಿಳಿಸಿದರು.

ಜನರ ಕಲ್ಯಾಣಕ್ಕಾಗಿ ಪೊಲೀಸ್ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದವರಲ್ಲಿ ಬೆಸನಕೋಪ ಕೂಡ ಒಬ್ಬರಾಗಿದ್ದಾರೆ. ಈ ಮೂಲಕ ಹಲವು ಯುವಕರಿಗೆ ಅವರು ಮಾದರಿಯಾಗಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT