ಸಂಗ್ರಹ ಚಿತ್ರ 
ರಾಜಕೀಯ

ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

ವಿಜಯಪುರ: ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಟ್ಟಣಶೆಟ್ಟಿ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪಕ್ಷದಲ್ಲಿಯೇ ಉಳಿಯಲು ನಿರ್ಧರಿಸಿದ್ದೇನೆ. ಆದರೆ, ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ. ಯತ್ನಾಳ್ ಅವರನ್ನು ಹೊರತುಪಡಿಸಿ ಪಕ್ಷದ ಇತರೆ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆಂದು ಹೇಳಿದ್ದಾರೆ.

ಯತ್ನಾಳ್ ನನ್ನನ್ನು ಮತ್ತು ನನ್ನ ಬೆಂಬಲಿಗರನ್ನು ಪ್ರಚಾರದಿಂದ ಸಂಪೂರ್ಣವಾಗಿ ದೂರ ಇಟ್ಟಿದ್ದಾರೆ. ಅವರಿಗೆ ಇದೀಗ ನನ್ನ ಮತ್ತು ನನ್ನ ಬೆಂಬಲಿಗರ ಅಗತ್ಯವಿಲ್ಲ. ಹೀಗಾಗಿ ಅವರ ಪರ ಪ್ರಚಾರ ಮಾಡುವ ಅವಶ್ಯಕತೆ ನನಗೂ ಇಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಇತರ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ನನ್ನನ್ನು ಪ್ರಚಾರಕ್ಕೆ ಆಹ್ವಾನಿಸಿದ್ದಾರೆ. ಅವರ ಪರ ಪ್ರಚಾರ ಮಾಡುತ್ತೇನೆಂದು ಹೇಳಿದರು.

ಹಲವು ಬಾರಿ ಪ್ರಯತ್ನ ಮಾಡಿದರೂ ಪಕ್ಷವು ನನಗೆ ಟಿಕೆಟ್ ನಿರಾಕರಿಸಿದ್ದು, ಇದು ನನಗೆ ನೋವುಂಟು ಮಾಡಿದೆ. ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲು ಬೆಂಬಲಿಗರ ಸಭೆ ಕರೆದಿದ್ದೇನೆ. ಸಭೆ ಬಳಿಕ ನಿರ್ಧಾರ ಕೈಗೊಳ್ಳುತ್ತೇನೆಂದರು.

ಚುನಾವಣೆಯಲ್ಲಿ ಯತ್ನಾಳ್‌ಗೆ ಮತ ಹಾಕದಿರುವ ಬಣಜಿಗ ಸಮುದಾಯದ ನಿರ್ಧಾರ ಕುರಿತು ಮಾತನಾಡಿ, ಇದು ಸಮುದಾಯದ ನಿರ್ಧಾರ, ಅದನ್ನು ಬೆಂಬಲಿಸುವುದಿಲ್ಲ ಮತ್ತು ವಿರೋಧಿಸುವುದೂ ಇಲ್ಲ ಎಂದರು.

ನಾನು ಎಂದಿಗೂ ಜಾತಿ ರಾಜಕೀಯವನ್ನು ಮಾಡುವುದಿಲ್ಲ. ಏಕೆಂದರೆ ನಾನು ಯಾವಾಗಲೂ ಅಂತರ್ಗತ ರಾಜಕೀಯದಲ್ಲಿ ನಂಬಿಕೆ ಹೊಂದಿದ್ದೇನೆ, ಆದರೆ, ಇಂದು ಜಾತಿ ರಾಜಕೀಯವು ವಾಸ್ತವಕ್ಕೆ ತಿರುಗಿದೆ. ರಾಜಕೀಯ ಪಕ್ಷಗಳು ತಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್ ನಿರಾಕರಿಸಿದಾಗ ಸಮಾಜದ ಮುಖಂಡರಿಗೆ ನೋವಾಗುವುದು ಸಹಜ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

Women's T20 World Cup 2026: ಭಾರತ vs ಪಾಕಿಸ್ತಾನ ಪಂದ್ಯ, ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

ಸಾಮಾನ್ಯವಾದ ನೀರಿನ ಬಾಟಲಿಗೂ ವಿಮಾನ ನಿಲ್ದಾಣಗಳು ಹೆದರುತ್ತವೇಕೆ?

SCROLL FOR NEXT